ದೇಶಕ್ಕೆ ಕಾಂಗ್ರೆಸ್ ಕೊಡುಗೆ ಅಪಾರ

ಜಗಳೂರಿನ ಮಾಜಿ ಶಾಸಕ ಹೆಚ್.ಪಿ.ರಾಜೇಶ್

ಜಗಳೂರು, ಡಿ.28- ದೇಶದ ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷದ ಕೊಡುಗೆ ಅಪಾರ ಎಂದು ಮಾಜಿ ಶಾಸಕ ಎಚ್.ಪಿ.ರಾಜೇಶ್ ಅಭಿಪ್ರಾಯ ವ್ಯಕ್ತಪಡಿಸಿದರು.

ಪಟ್ಟಣದ ಕಾಂಗ್ರೆಸ್ ಕಛೇರಿಯಲ್ಲಿ ಇಂದು ಹಮ್ಮಿಕೊಂಡಿದ್ದ ಕಾಂಗ್ರೆಸ್ ಪಕ್ಷದ ಸಂಸ್ಥಾಪನಾ ದಿನಾಚರಣೆ ಹಾಗೂ ಆನ್‌ಲೈನ್ ಸದಸ್ಯತ್ವ ಅಭಿಯಾನ ಮತ್ತು ಮೇಕೆದಾಟು ಜಲಾಶಯ ನಿರ್ಮಾಣ ಪಾದಯಾತ್ರೆಯ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಮೇಕೆದಾಟು ಜಲಾಶಯ ನಿರ್ಮಾಣ ಪಾದಯಾತ್ರೆಗೆ ತಾಲ್ಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ  ಕಾರ್ಯಕರ್ತರು ಭಾಗವಹಿಸಲು ಕರೆ ನೀಡಿದರು.

ಕೆಪಿಸಿಸಿ ತಾಲ್ಲೂಕು ಉಸ್ತುವಾರಿ ಕಲ್ಲೇಶ್ ರಾಜ್ ಪಟೇಲ್ ಪ್ರಾಸ್ತಾವಿಕವಾಗಿ ಮಾತನಾಡಿ, ಕೆಪಿಸಿಸಿ ವರಿಷ್ಠರ ಸಲಹೆಯಂತೆ ಆನ್‌ಲೈನ್ ಸದಸ್ಯತ್ವ ನೋಂದಣಿ ಅಭಿಯಾನ ಹಮ್ಮಿಕೊಂಡಿದ್ದು, ಶೀಘ್ರದಲ್ಲಿ ಪ್ರತಿ ಬೂತ್ ಮಟ್ಟಕ್ಕೆ  ನೋಂದಣಿಗಾರರನ್ನು ನೇಮಿಸಲು ಕುರಿತು ಮಾಹಿತಿ ನೀಡಿದರು.

ಕೆಪಿಸಿಸಿ ಎಸ್‌ಟಿ ಘಟಕದ ಕೆ.ಪಿ. ಪಾಲಯ್ಯ ಮಾತನಾಡಿ, ಕಾಂಗ್ರೆಸ್ ಪಕ್ಷದ ಸಂಘಟನೆ ಬಲವರ್ಧನೆಗೊಳಿಸಿ, ಮುಂಬರುವ ಚುನಾವಣೆಗಳಲ್ಲಿ ಆಡಳಿತ ಬಿಜೆಪಿ ಪಕ್ಷಕ್ಕೆ ತಕ್ಕ ಉತ್ತರ ನೀಡಬೇಕು ಎಂದು ಕಿವಿಮಾತು ಹೇಳಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಷಂಷೀರ್ ಅಹಮ್ಮದ್, ಜಿ.ಪಂ. ಮಾಜಿ ಅಧ್ಯಕ್ಷೆ ನಾಗರತ್ನಮ್ಮ, ಮುಖಂಡರಾದ ಚಿಕ್ಕಮ್ಮನಹಟ್ಟಿ ದೇವೇಂದ್ರಪ್ಪ, ಪಲ್ಲಾಗಟ್ಟೆ ಶೇಖರಪ್ಪ, ಬಿ.ಲೋಕೇಶ್, ತಿಪ್ಪೇಸ್ವಾಮಿ, ಯು.ಜಿ. ಶಿವಕುಮಾರ್, ಕುಬೇಂದ್ರಪ್ಪ, ಸಿ.ತಿಪ್ಪೇಸ್ವಾಮಿ, ಅಹಮ್ಮದ್ ಅಲಿ, ಪಪಂ ಸದಸ್ಯರಾದ ರವಿಕುಮಾರ್‌, ರಮೇಶ್, ಶಕೀಲ್ ಅಹ್ಮದ್, ಮಹಿಳಾ ಘಟಕದ ಸಾವಿತ್ರಮ್ಮ, ಹನುಮಕ್ಕ, ಯುವ ಕಾಂಗ್ರೆಸ್ ಅಧ್ಯಕ್ಷ ತಿಪ್ಪೇಸ್ವಾಮಿ ಮತ್ತಿತರರು ಭಾಗವಹಿಸಿದ್ದರು.

error: Content is protected !!