ವಿಜೃಂಭಣೆಯ ದುಗ್ಗಮ್ಮನ ಕಾರ್ತಿಕೋತ್ಸವ

ದಾವಣಗೆರೆ,ಡಿ.28- ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿ ದೇವಸ್ಥಾನದಲ್ಲಿ ಇಂದು ಏರ್ಪಾಡಾಗಿದ್ದ ಕಾರ್ತಿಕ ಮಹೋತ್ಸವವು ವಿಜೃಂಭಣೆಯಿಂದ ಜರುಗಿತು.

ಕಾರ್ತಿಕ ದೀಪೋತ್ಸವದ ಅಂಗವಾಗಿ ಶ್ರೀ ದೇವಿಗೆ ವಿಶೇಷ ಪೂಜೆ ಮತ್ತು ವಿಶೇಷ ಅಲಂಕಾರ ಮಾಡಲಾಗಿತ್ತು. ಅಪಾರ ಸಂಖ್ಯೆಯ ಭಕ್ತರು ದೇವಸ್ಥಾನಕ್ಕೆ ಆಗಮಿಸಿ, ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು. 

ಹಿರಿಯ ಶಾಸಕರೂ ಆಗಿ ರುವ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಡಾ. ಶಾಮನೂರು ಶಿವಶಂಕರಪ್ಪ ಅವರು ಬೆಳಿಗ್ಗೆ ದೇವಸ್ಥಾನಕ್ಕೆ ಆಗಮಿಸಿ ಶ್ರೀ ದೇವಿಗೆ ಪೂಜೆ ಸಲ್ಲಿಸಿದರು. ರಾತ್ರಿ ಆಯೋಜನೆ ಗೊಂಡಿದ್ದ ಕಾರ್ತಿಕ ದೀಪೋತ್ಸವ ವನ್ನು ಉಪ ವಿಭಾಗಾಧಿಕಾರಿ ಶ್ರೀಮತಿ ಮಮತಾ ಹೊಸಗೌಡರ್ ಉದ್ಘಾಟಿಸಿದರು.

error: Content is protected !!