ನಗರ ದೇವತೆ ದುಗ್ಗಮ್ಮನ ದೇವಸ್ಥಾನದಲ್ಲಿ ನವರಾತ್ರಿ ಉತ್ಸವಕ್ಕೆ ಎಸ್ಸೆಸ್ ಚಾಲನೆ

ದಾವಣಗೆರೆ,ಅ.17- ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿ ದೇವಸ್ಥಾನದಲ್ಲಿ 9 ದಿನಗಳ ದಸರಾ ಮಹೋತ್ಸವ ಇಂದು ಆರಂಭವಾಯಿತು. ಹಿರಿಯ ಶಾಸಕರೂ ಆಗಿರುವ ದುಗ್ಗಮ್ಮ  ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಡಾ. ಶಾಮನೂರು ಶಿವಶಂಕರಪ್ಪ ಅವರು ಶ್ರೀ ದೇವಿಗೆ ವಿಶೇಷ ಪೂಜೆ ಸಲ್ಲಿಸಿ,  ದೀಪ ಬೆಳಗಿಸುವುದರ ಮೂಲಕ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಿದರು.

ಕೈಗಾರಿಕೋದ್ಯಮಿ ಎಸ್.ಎಸ್. ಗಣೇಶ್ ಮತ್ತು ಶ್ರೀಮತಿ ರೇಖಾ ಗಣೇಶ್,  ಮಾಜಿ ಸಚಿವ ಶಾಮನೂರು ಮಲ್ಲಿಕಾರ್ಜುನ್ ಮತ್ತು ಶ್ರೀಮತಿ ಪ್ರಭಾ ಮಲ್ಲಿಕಾರ್ಜುನ್ ದಂಪತಿಗಳಲ್ಲದೇ, ಎಸ್ಸೆಸ್ ಕುಟುಂಬದ ಸದಸ್ಯರು ಎಸ್ಸೆಸ್ ಅವರಿಗೆ ಜ್ಯೋತಿ ಬೆಳಗಿಸುವಿಕೆಗೆ ಸಾಥ್ ನೀಡಿದರು. ದೇವಸ್ಥಾನದ ಧರ್ಮದರ್ಶಿಗಳು, ಭಕ್ತಾದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

error: Content is protected !!