ಆ್ಯಪ್ ಮೂಲಕ ರೈತರೇ ಮಾಹಿತಿ ದಾಖಲಿಸಬಹುದು

ಆ್ಯಪ್ ಮೂಲಕ ರೈತರೇ ಮಾಹಿತಿ ದಾಖಲಿಸಬಹುದು - Janathavaniದಾವಣಗೆರೆ, ಆ.16- ಈ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯನ್ನು ರೈತರ ಬೆಳೆ ಸಮೀಕ್ಷೆ ಮೊಬೈಲ್ ಆಪ್‌ ಮೂಲಕ ಕೈಗೊಳ್ಳಲಾಗುತ್ತಿದೆ.

ರೈತರು ತಮ್ಮ ಜಮೀನುಗಳಲ್ಲಿ ತಾವು ಬೆಳೆದ ಬೆಳೆಗಳ ಮಾಹಿತಿಯನ್ನು ಛಾಯಾಚಿತ್ರ ಸಹಿತ ಆಪ್‌ಲೋಡ್ ಮಾಡುವ ಒಂದು ವಿನೂತನ ಯೋಜನೆಯಾಗಿದೆ. ರೈತರು ಗೂಗಲ್ ಪ್ಲೇ ಸ್ಟೋರ್ ಮೂಲಕ ರೈತರ ಬೆಳೆ ಸಮೀಕ್ಷೆ ಮೊಬೈಲ್ ಆಪ್ ಡೌನ್‌ಲೋಡ್ ಮಾಡಿ ಕೊಳ್ಳುವ ಮೂಲಕ ತಮ್ಮ ಜಮೀನುಗಳಲ್ಲಿ ಬೆಳೆದ ಮುಂಗಾರು ಹಂಗಾಮಿನ ಬೆಳೆ ಮಾಹಿತಿಯನ್ನು ತಾವೇ ದಾಖಲು ಮಾಡಬಹುದು. ಅಥವಾ ಖಾಸಗಿ ನಿವಾಸಿಗಳ ಸಹಯೋಗದೊಂದಿಗೆ ಬೆಳೆ ಸಮೀಕ್ಷೆ ಆಪ್‌ನಲ್ಲಿ ದಾಖಲಿಸಬಹುದಾಗಿದೆ.

ರೈತ ಬಾಂಧವರು  ತಮ್ಮ ಜಮೀನುಗಳ ಮುಂಗಾರು ಬೆಳೆ ಮಾಹಿತಿಯನ್ನು ಬೆಳೆ ಸಮೀಕ್ಷೆ ಆಪ್ ಮೂಲಕ ತಾವೇ ದಾಖಲಿಸಿಕೊಳ್ಳಲು ತಿಳಿಸಿದೆ. ಬೆಳೆ ಸಮೀಕ್ಷೆ ಕೈಗೊಳ್ಳಲು  ಗ್ರಾಮ ಮ ಟ್ಟದಲ್ಲಿ ಪ್ರತಿ ಗ್ರಾಮಗಳಿಗೆ ಖಾಸಗಿ ನಿವಾಸಿಗಳನ್ನು (ಖಾಸಗಿ ಸಮೀಕ್ಷೆದಾರರು) ಆಯ್ಕೆ ಮಾಡಲಾಗಿದ್ದು, ರೈತರು ಬೆಳೆ ಸಮೀಕ್ಷೆ ಕೈಗೊಳ್ಳು ವಾಗ ಖಾಸಗಿ ನಿವಾಸಿಗಳ ಸಹಕಾರ ಪಡೆಯಬಹುದಾಗಿದೆ.

ರೈತರು ತಮ್ಮ ಮೊಬೈಲ್‌ನಲ್ಲಿ ಬೆಳೆ ಸಮೀಕ್ಷೆ ಕೈಗೊಳ್ಳಲು ಆ.24 ಕೊನೆಯ ದಿನವಾಗಿದೆ. ಈ ಕುರಿತು ಹೆಚ್ಚಿನ  ಮಾಹಿತಿಯನ್ನು ಕೃಷಿ ಇಲಾಖೆ, ಕಂದಾಯ ಇಲಾಖೆ, ತೋಟಗಾರಿಕೆ ಇಲಾಖೆ, ರೇಷ್ಮೆ ಇಲಾಖೆ ಮತ್ತು ಗ್ರಾಮ ಪಂಚಾಯ್ತಿಗಳಲ್ಲಿ ಪಡೆದುಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

error: Content is protected !!