ಎಸ್ಸೆಸ್ ನಿವಾಸಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್‌ ಭೇಟಿ

ಎಸ್ಸೆಸ್ ನಿವಾಸಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್‌ ಭೇಟಿ - Janathavani

ದಾವಣಗೆರೆ, ಆ.30- ಚಾಲೆಂ ಜಿಂಗ್ ಸ್ಟಾರ್ ದರ್ಶನ್ ಗೋವು ಸಾಕಣೆ ಹಾಗೂ ಕುದುರೆ ಸಾಕಣೆ ಕುರಿತು ಮಾಹಿತಿ ಪಡೆಯಲು ಶಾಸಕ ಮತ್ತು ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರ ಫಾರ್ಮ್ ಹೌಸ್‍ಗೆ ಇಂದು ಭೇಟಿ ನೀಡಿದ್ದರು.

ಮಧ್ಯಾಹ್ನದಿಂದ ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ದುಗ್ಗಾವತಿಯಲ್ಲಿನ ಶಾಮನೂರು ಅವರ ತೋಟಕ್ಕೆ ಭೇಟಿ ನೀಡಿದ್ದಾರೆ. ಅಲ್ಲಿನ ಗೋ ಪಾಲನೆ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ನಂತರ ದಾವಣಗೆರೆ ನಗರದ ಕಲ್ಲೇಶ್ವರ ರೈಸ್ ಮಿಲ್ ಬಳಿ ಕುದುರೆಗಳ ಪಾಲನೆ ಬಗ್ಗೆ ಮಾಹಿತಿ ಪಡೆದಿದ್ದಾರೆ. ಈ ವೇಳೆ ನಟ ದರ್ಶನ್‍ಗೆ ಶಾಸಕ ಶಾಮನೂರು ಶಿವಶಂಕರಪ್ಪ, ಪುತ್ರ – ಮಾಜಿ ಸಚಿವ ಶಾಮನೂರು ಮಲ್ಲಿಕಾರ್ಜುನ ಸಾಥ್ ನೀಡಿದ್ದರು.

ಸಂಜೆವರೆಗೆ ವಿವಿಧ ಫಾರ್ಮ್ ಹೌಸ್‍ಗೆ ದರ್ಶನ್ ಭೇಟಿ ನೀಡಿದ್ದು, ಮಾಹಿತಿ ಸಂಗ್ರಹಿಸಿದ್ದಾರೆ. ನಂತರ ರಾತ್ರಿ ಎಸ್ಸೆಸ್ ಮನೆಯಲ್ಲಿಯೇ ಊಟ ಮಾಡಿದ್ದಾರೆ. ಇಂದು ನಗರದಲ್ಲಿಯೇ ವಾಸ್ತವ್ಯ ಹೂಡಿದ್ದು, ಬಾಪೂಜಿ ಗೆಸ್ಟ್ ಹೌಸ್‍ನಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ.

ಬೆಳಗ್ಗೆ ಮತ್ತೆ ಕೆಲ ಪ್ರಗತಿಪರ ರೈತರನ್ನು ದರ್ಶನ್ ಅವರು ಭೇಟಿ ಮಾಡಲಿದ್ದು, ವಿವಿಧ ವಿಚಾರಗಳ ಕುರಿತು ಚರ್ಚಿಸಲಿದ್ದಾರೆ.  ಈ ವೇಳೆ ಅಭಿಮಾನಿಗಳು ನಟ ದರ್ಶನ್ ಅವ ರನ್ನು ನೋಡಲು ಮುಗಿಬಿದ್ದಿದ್ದರು.

ಕಾರ್ಯನಿಮಿತ್ತ್ಯ ನಗರಕ್ಕೆ ಆಗಮಿಸಿದ್ದ ನಟ ದರ್ಶನ್‌ ಅವರನ್ನು ಇಲ್ಲಿನ ಬಾಪೂಜಿ ಅತಿಥಿ ಗೃಹದಲ್ಲಿ ಪಾಲಿಕೆಯ ವಿರೋಧ ಪಕ್ಷದ ನಾಯಕ ಎ.ನಾಗರಾಜ್, ಪಾಲಿಕೆ ಸದಸ್ಯರಾದ ದೇವರಮನೆ ಶಿವಕುಮಾರ್, ಮಂಜುನಾಥ್ ಗಡಿಗುಡಾಳ್, ಕಾಂಗ್ರೆಸ್ ನಾಯಕರಾದ ದಿನೇಶ್ ಕೆ.ಶೆಟ್ಟಿ, ಮುದೇಗೌಡ್ರ ಗಿರೀಶ್ ಹಾಗೂ ಮತ್ತಿತರರು ಭೇಟಿ ಮಾಡಿದರು.

error: Content is protected !!