ಭದ್ರಾ ಜಲಾಶಯ ನೀರಿನ ಮಟ್ಟ ಗರಿಷ್ಠ : ಮುನ್ನೆಚ್ಚರಿಕೆ ಕ್ರಮಕ್ಕೆ ಸೂಚನೆ

ದಾವಣಗೆರೆ, ಸೆ.23 – ಭದ್ರಾ ಜಲಾಯನ ಪ್ರದೇಶದಲ್ಲಿ ಸತತವಾಗಿ ಮಳೆ ಬೀಳುತ್ತಿರುವುದರಿಂದ ಜಲಾಶಯಕ್ಕೆ ಬರುತ್ತಿರುವ ಒಳಹರಿವಿನ ಪ್ರಮಾಣ ಕ್ರಮೇಣ ಹೆಚ್ಚಾಗುತ್ತಿದ್ದು, ಜಲಾಶಯದ ಗರಿಷ್ಠ ನೀರಿನ ಮಟ್ಟ ಅತೀ ಶೀಘ್ರವಾಗಿ ತಲುಪುವ ಸಂಭವವಿದೆ. 

ಅಣೆಕಟ್ಟು ಸುರಕ್ಷತೆಯ ದೃಷ್ಟಿಯಿಂದ ಯಾವ ಸಮಯದಲ್ಲಾದರೂ ಒಳ ಹರಿವಿನ ಪ್ರಮಾಣಕ್ಕೆ ಅನುಗುಣವಾಗಿ ಸ್ಪಿಲ್ ವೇ ಗೇಟ್ ಮುಖಾಂತರ ನದಿಗೆ, ಭದ್ರಾ ಬಲದಂಡೆ ನಾಲೆ, ಎಡದಂಡ ನಾಲೆಗಳಲ್ಲಿ ಹೆಚ್ಚುವರಿ ನೀರನ್ನು ಹರಿ ಬಿಡಲಾಗುವುದು. ಸಾರ್ವಜನಿಕ ಹಿತದೃಷ್ಟಿಯಿಂದ ಕಾಲುವೆ ಮತ್ತು ನದಿ ಪಾತ್ರಗಳಲ್ಲಿ ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನ-ಕರುಗಳ ಮೈ ತೊಳೆಯುವುದು ಮತ್ತು ದೈನಂದಿನ ಚಟುವಟಿಕೆಗಳನ್ನು ಮಾಡುವುದು ಇತ್ಯಾದಿಗಳನ್ನು ನಿಷೇಧಿಸಲಾಗಿದೆ.

ನದಿ ಪಾತ್ರದಲ್ಲಿರುವ ಪ್ರದೇಶದ ಗ್ರಾಮಸ್ಥರಿಗೆ ತಗ್ಗು ಪ್ರದೇಶಗಳಲ್ಲಿ ಯಾವುದೇ ಚಟುವಟಿಕೆಗಳನ್ನು ಮಾಡದೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮುನ್ನೆಚ್ಚರಿಕೆಯಿಂದಿರಲು ಸೂಚಿಸಲಾಗಿದೆ ಎಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಹಾಗೂ ಕ.ನೀ.ನಿ.ನಿ ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರು ತಿಳಿಸಿದ್ದಾರೆ.

error: Content is protected !!