ವಿದ್ಯಾರ್ಥಿನಿಯರಿಗೆ ಋತುಚಕ್ರ ನೈರ್ಮಲ್ಯ ನಿರ್ವಹಣೆ ಅರಿವು ಕಾರ್ಯಕ್ರಮ

ವಿದ್ಯಾರ್ಥಿನಿಯರಿಗೆ ಋತುಚಕ್ರ ನೈರ್ಮಲ್ಯ  ನಿರ್ವಹಣೆ ಅರಿವು ಕಾರ್ಯಕ್ರಮ

 ದಾವಣಗೆರೆ, ಮೇ 29- ತಾಲ್ಲೂಕು ಶಿಶು ಅಭಿವೃದ್ದಿ ಯೋಜನೆ,   ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಗರ್ಲ್ಸ್ ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ ಋತುಚಕ್ರ ನೈರ್ಮಲ್ಯ ನಿರ್ವಹಣೆ ಕುರಿತಂತೆ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

 ಸಹಾಯಕ ಶಿಶು ಅಭಿವೃದ್ದಿ ಯೋಜನೆ ಅಧಿಕಾರಿ  ಶ್ರೀಮತಿ ಪ್ರಿಯದರ್ಶಿನಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ. ಚೈತಾಲಿ ವಿಷಯ ಕುರಿತು ಸಂಪೂರ್ಣ ಮಾಹಿತಿ ನೀಡಿದರು. ವಾರ್ಡನ್ ಕವಿತಾ ಹಾಗೂ ಮೇಲ್ವಿಚಾರಕರಾದ ಶಿವಲೀಲಾ, ಸುಮಂಗಲಾ ,ಗಂಗಮ್ಮ ,ಸುಧಾ ಮತ್ತಿತರರು ಹಾಜರಿದ್ದರು.

error: Content is protected !!