ಕೃಷಿ ಇಲಾಖೆ ಅಧೀಕ್ಷಕ ಶಿವಶಂಕರ್‌ಗೆ ಬೀಳ್ಕೊಡುಗೆ

ಕೃಷಿ ಇಲಾಖೆ ಅಧೀಕ್ಷಕ ಶಿವಶಂಕರ್‌ಗೆ ಬೀಳ್ಕೊಡುಗೆ

ದಾವಣಗೆರೆ, ಮೇ 29- ಕೃಷಿ ಇಲಾಖೆಯಲ್ಲಿ 41 ವರ್ಷಗಳಿಂದ ಸೇವೆ ಸಲ್ಲಿಸಿದ ಕೆ.ಶಿವಶಂಕರ್ ಅವರು ಇದೀಗ ನಿವೃತ್ತಿ ಹೊಂದಿದ್ದಾರೆ. ಕೃಷಿ ಇಲಾಖೆಯಲ್ಲಿ ಅಧಿಕಾರಿಗಳು/ನೌಕರರು ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಕೆ. ಶಿವಶಂಕರ್ ಅವರನ್ನು ಸನ್ಮಾನಿಸಲಾಯಿತು.

ಜಂಟಿ ಕೃಷಿ ನಿರ್ದೇಶಕ ಶ್ರೀನಿವಾಸ್ ಚಿಂತಾಲ್, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪಾಲಾಕ್ಷಿ ಮಾತನಾಡಿ, ಶಿವಶಂಕರ್ ಅವರ ಸೇವೆಯನ್ನು ಶ್ಲ್ಯಾಘಿಸಿದರು.

ಜಿಲ್ಲಾ ಸರ್ಕಾರಿ ನೌಕರರ ಸಂಘದ ಮಾಜಿ ಜಿಲ್ಲಾಧ್ಯಕ್ಷ ಎ.ಆರ್.ಉಜ್ಜಿನಪ್ಪ, ಬಿ.ಎಸ್.ಬಸವರಾಜಪ್ಪ, ಉಪ ಕೃಷಿ ನಿರ್ದೇಶಕ ಆರ್.ತಿಪ್ಪೇಸ್ವಾಮಿ, ಜಂಟಿ ಕೃಷಿ ನಿರ್ದೇಶಕರ ಕಚೇರಿಯ ಆಡಳಿತಾಧಿಕಾರಿ ಎನ್.ಎಲ್. ವೀಣಾ, ಜಿ.ಪಂ. ಕಚೇರಿಯ ಸಹಾಯಕ ಕಾರ್ಯದರ್ಶಿ ಬಸವರಾಜ್,  ಉಪನಿರ್ದೇಶಕರ ಕಛೇರಿಯ ಸಹಾಯಕ ಆಡಳಿತಾಧಿಕಾರಿ ಎಂ.ಎಂ.ಹೀರೆಮಠ್, ಹರಿಹರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ರೇವಣಸಿದ್ದಪ್ಪ, ಅಂಗಡಿ ಪಂಚಮಸಾಲಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಶ್ರೀಧರ್ ಮತ್ತು ಇತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. 

ಜಿಲ್ಲಾ ಸರ್ಕಾರಿ ನೌಕರರ ಸಂಘದ ಖಜಾಂಚಿ ಹಾಗೂ ಸಹಾಯಕ ಕೃಷಿ ನಿರ್ದೇಶಕರ ಕಚೇರಿ  ಅಧೀಕ್ಷಕ ಬಿ.ಆರ್.ತಿಪ್ಪೇಸ್ವಾಮಿ ಮಾತನಾಡಿ ದರು. ನಂದಿನಿ ದೇವರಗುಡಿ ಪ್ರಾರ್ಥಿಸಿದರು. ನಾಗೇಶ್ ವಂದಿಸಿದರು.

error: Content is protected !!