ಬಿ.ಎಲ್.ಓ.ಗಳಿಗೆ ಜಿಲ್ಲಾಡಳಿತ ಅಭಿನಂದನೆ

ಬಿ.ಎಲ್.ಓ.ಗಳಿಗೆ ಜಿಲ್ಲಾಡಳಿತ ಅಭಿನಂದನೆ

ದಾವಣಗೆರೆ, ಮೇ 29- ಉತ್ತಮ ಪ್ರಜಾಪ್ರಭುತ್ವ ನಿರ್ಮಾಣಕ್ಕೆ ಹೆಚ್ಚಿನ ಮತದಾನ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಹೇಳಿದರು.

ಸೋಮವಾರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಹಿಂದಿನ ವಿಧಾನಸಭಾ ಚುನಾವಣೆಗಿಂತಲೂ  ಈ ಬಾರಿ ಚುನಾವಣೆಯಲ್ಲಿ ಮತಗಟ್ಟೆಗಳಲ್ಲಿ  ಶೇ.20 ರಷ್ಟು ಮತದಾನ ಪ್ರಮಾಣ ಹೆಚ್ಚಿಸಿದ ಬಿಎಲ್‍ಓಗಳ ಅಭಿನಂದನಾ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು.

ಜಿಲ್ಲೆಯ 101 ಮತಗಟ್ಟೆಗಳಲ್ಲಿ ಶೇ 10 ಕ್ಕಿಂತ ಹೆಚ್ಚು ಮತದಾನವಾಗಿದ್ದು, ಮಾಯಕೊಂಡ ಕ್ಷೇತ್ರದ 1 ಮತಗಟ್ಟೆ ಯಲ್ಲಿ ಶೇ 45 ರಷ್ಟು ಮತದಾನ ಹೆಚ್ಚಾಗಿದೆ. ಮತಗಟ್ಟೆ ಅಧಿ ಕಾರಿಗಳು ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಮತದಾ ರರ ಸೇರ್ಪಡೆ ಹಾಗೂ ಮನೆ ಮನೆಗೂ ತೆರಳಿ ಮತದಾರರ ಚೀಟಿಯನ್ನು ತಲುಪಿಸಲು ಶ್ರಮಿಸಿದ್ದಾರೆ ಎಂದರು.

ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಸಹಜವಾಗಿ ಹೆಚ್ಚಿನ ಮತದಾನವಾಗಿದ್ದು, ನಗರ ಪ್ರದೇಶಗಳಲ್ಲಿ ಮತದಾನ ಪ್ರಮಾಣ ಕಡೆಮೆಯಾಗಿದೆ. ಮತದಾನ ಪಟ್ಟಿ ಪರಿಷ್ಕರಣಾ ಸಮಯದಲ್ಲಿ ಎರಡು ಕಡೆ ಪಟ್ಟಿಯಲ್ಲಿ ಹೆಸರು, ಮೃತರ ಹೆಸರು ಸೇರಿದಂತೆ 1 ಲಕ್ಷ ಜನ ಮತದಾರರನ್ನು ಪಟ್ಟಿಯಿಂದ ತೆಗೆದು ಹಾಕಲಾಗಿದೆ. ವಿವಿಧ ರೀತಿಯ ಮತದಾನ ಜಾಗೃತಿ ಕಾರ್ಯಕ್ರಮಗಳನ್ನು ಕೈಗೊಂಡು ಜಿಲ್ಲೆಯ ಮತದಾನ ಪ್ರಮಾಣವನ್ನು ಹೆಚ್ಚಿಸಲಾಗಿದೆ ಎಂದು ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಧಿಕಾರಿ ಸುರೇಶ್ ಹಿಟ್ನಾಳ್ ಮಾತನಾಡಿ, ಹಿಂದಿನ ಪ್ರಮಾಣ ಕ್ಕಿಂತ ಈ ಬಾರಿ  ಶೇ.10ರಷ್ಟು ಮತದಾನ ಪ್ರಮಾಣವನ್ನು ಹೆಚ್ಚಿಸುವಂತೆ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ಗುರಿ ನೀಡಲಾಗಿತ್ತು. ಅದರಂತೆ  ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿಯೂ ಮತದಾನ ಪ್ರಮಾಣ ಹೆಚ್ಚಿಗೆಯಾಗಿದೆ. 

ಮುಂಬರುವ ಚುನಾವಣೆಯಲ್ಲೂ ಸಹ ಇನ್ನೂ
ಹೆಚ್ಚಿನ ಪರಿಣಾಮಕಾರಿಯಾಗಿ ಕಾರ್ಯಗತಗೊಳ್ಳಬೇಕು  ಎಂದರು.

ಹೊನ್ನಾಳಿ ಉಪವಿಭಾಗಾಧಿಕಾರಿ ಹುಲ್ಮನಿ ತಿಮ್ಮಣ್ಣ, ಆರ್‍ಓ, ಎಆರ್‍ಓ ಹಾಗೂ ಮತಗಟ್ಟೆ ಹಂತದ ಅಧಿಕಾರಿಗಳು ಉಪಸ್ಥಿತರಿದ್ದರು.

error: Content is protected !!