ಹೊಸಹಳ್ಳಿ ಕೃಷಿ ಸಹಕಾರ ಸಂಘದ ಅಧ್ಯಕ್ಷರಾಗಿ ಮಂಜುನಾಥ ಮಾನೆ

ಹೊಸಹಳ್ಳಿ ಕೃಷಿ ಸಹಕಾರ ಸಂಘದ ಅಧ್ಯಕ್ಷರಾಗಿ ಮಂಜುನಾಥ ಮಾನೆ

ಸಾಸ್ವೆಹಳ್ಳಿ, ಜೂ. 1- ಹೋಬಳಿಯ ಹೊಸಹಳ್ಳಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ವಿ. ಮಂಜುನಾಥ್ ಮಾನೆ, ಉಪಾಧ್ಯಕ್ಷರಾಗಿ ಡಿ.ಪಿ. ಮಂಜುನಾಥ್ ಅವರು ಬುಧವಾರ ಅವಿರೋಧವಾಗಿ ಆಯ್ಕೆಯಾದರು.

ಹಿಂದಿನ ಅಧ್ಯಕ್ಷ ಹೆಚ್. ಧನಂಜಯ, ಉಪಾಧ್ಯಕ್ಷೆ ಸುಮಿತ್ರಮ್ಮ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಗಳಿಗೆ ಬುಧವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ವಿ.ಮಂಜುನಾಥ ಮಾನೆ,  ಉಪಾಧ್ಯಕ್ಷ ಸ್ಥಾನಕ್ಕೆ ಡಿ.ಪಿ. ಮಂಜುನಾಥ್ ಅವರಿಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ  ಸಹಕಾರ ಸಂಘಗಳ ತಾಲ್ಲೂಕು ಅಭಿವೃದ್ಧಿ ಅಧಿಕಾರಿ ರಮೇಶ್ ಅವರು ಅವಿರೋಧ ಆಯ್ಕೆಯನ್ನು ಘೋಷಣೆ ಮಾಡಿದರು. 

ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಎಂ. ನಾಗರಾಜ್, ಎಂ.ಜಿ. ಹಾಲಪ್ಪ, ಹೆಚ್.ಆರ್. ಹಾಲೇಶ್, ಎನ್.ಎಸ್. ಮಹೇಶ್ವರಪ್ಪ, ಡಿಸಿಸಿ ಬ್ಯಾಂಕಿನ ಕ್ಷೇತ್ರಾಧಿಕಾರಿ ವಿಜಯ್ ಕುಮಾರ್, ಬ್ಯಾಂಕಿನ ಸಿಬ್ಬಂದಿ ಜ್ಯೋತಿ ಉಪಸ್ಥಿತರಿದ್ದರು.

error: Content is protected !!