ಕ್ರೀಡೆಗಳಿಂದ ಮಾನಸಿಕ, ದೈಹಿಕ ಸದೃಢತೆ ಸಾಧ್ಯ

ಕ್ರೀಡೆಗಳಿಂದ ಮಾನಸಿಕ, ದೈಹಿಕ ಸದೃಢತೆ ಸಾಧ್ಯ

ವಕೀಲ ಎಲ್.ಹೆಚ್.ಅರುಣ್‍ಕುಮಾರ್

ದಾವಣಗೆರೆ, ಜೂ.6- ಹಲವು ಒತ್ತಡಗಳ ನಡುವೆ ಕೆಲಸ ನಿರ್ವಹಿಸುವ ವಕೀಲರಿಗೆ ಮಾನಸಿಕ ಮತ್ತು ದೈಹಿಕವಾಗಿ ಸದೃಢತೆ ಸಾಧಿಸಲು ಕ್ರೀಡಾಕೂಟಗಳು ಅವಶ್ಯಕ. ಈ ನಿಟ್ಟಿನಲ್ಲಿ ವಕೀಲರು ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳುವ ಮೂಲಕ ಸೌಹಾರ್ದತೆ ಕಾಪಾಡಿಕೊಳ್ಳಬೇಕು ಎಂದು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಎಚ್.ಅರುಣ್ ಕುಮಾರ್ ತಿಳಿಸಿದರು.

ಭಾನುವಾರ ಮುಂಜಾನೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ವಕೀಲರ ಸಂಘದಿಂದ ಆಯೋಜಿಸಲಾಗಿದ್ದ ವಕೀಲರ ಸೌಹಾರ್ದ ಕ್ರಿಕೆಟ್ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.

 ನ್ಯಾಯಾಲಗಳ ಕಾರ್ಯಕಲಾಪಗಳ ಹಿನ್ನೆಲೆಯಲ್ಲಿ ವಕೀಲರು ಸದಾ  ಬಂದಿಲ್ಲೊಂದು ಒತ್ತಡದಲ್ಲಿ ತೊಡಗಿರುತ್ತಾರೆ. ಇವರಿಗೆ ಮಾನಸಿಕವಾಗಿ ಹಾಗೂ ದೈಹಿಕವಾಗಿ ಬಿಡುವು ಬೇಕಾದರೆ ಇಂತಹ ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳಬೇಕು ಎಂದು ಹೇಳಿದರು.

ಸದ್ಯಕ್ಕೆ ನಗರದಲ್ಲಿ ಕೆಲಸ ನಿರ್ವಹಿಸುವ ವಕೀಲರಿಗೆ ಅಯೋಜಿಸಲಾಗಿರುವ ಈ ಕ್ರೀಡಾಕೂಟದಲ್ಲಿ ಎಲ್ಲ ವಕೀಲರು ಪಾಲ್ಗೊಂಡಿದ್ದು, ಹಲವು ಪ್ರತಿಭೆಗಳು ನಮ್ಮಲ್ಲಿವೆ. ಅಂತ ಪ್ರತಿಭೆಗಳನ್ನು ಹೊರತರಲು ಈ ಕ್ರೀಡಾಕೂಟ ಸಹಕರಿಯಾಗಲಿದೆ ಎಂದರು.

ಮುಂಬರುವ ದಿನಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಮತ್ತು ವಲಯ ಮಟ್ಟದಲ್ಲಿ ಕ್ರೀಡಾಕೂಟಗಳನ್ನು ಆಯೋಜಿಸಲು  ಜಿಲ್ಲಾ ವಕೀಲರ ಸಂಘ ನಿರ್ಧರಿಸಿದೆ ಎಂದು ಅವರು ತಿಳಿಸಿದರು.

ಈ ವೇಳೆ ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷ ಜಿ.ಕೆ.ಬಸವರಾಜ್ ಗೋಪನಾಳು, ಕಾರ್ಯದರ್ಶಿ ಎಸ್. ಬಸವರಾಜ್, ಸಹಕಾರ್ಯ ದರ್ಶಿ ಎ. ಎಸ್. ಮಂಜುನಾಥ್, ವಕೀಲರ ಸಂಘದ ಮಾಜಿ ಅಧ್ಯಕ್ಷ ಡಿ.ಪಿ.ಬಸವರಾಜ್, ಕಾರ್ಯದರ್ಶಿ ಎಲ್.ಹೆಚ್.ಪ್ರದೀಪ್, ಉಪಾಧ್ಯಕ್ಷ ದಿವಾಕರ್, ಸಹ ಕಾರ್ಯದರ್ಶಿ ಎ.ಸಿ.ರಾಘವೇಂದ್ರ, ಜಿ.ಕೆ.ಬಸವರಾಜ್, ವಕೀಲರಾದ ಯೋಗೇಶ್ವರಪ್ಪ, ಬಿ.ಬಿ.ರಾಮಪ್ಪ, ಲಕ್ಕಪ್ಪ, ಸೇರಿದಂತೆ   ಇತರರು ಇದ್ದರು.

error: Content is protected !!