ಎಲೆಬೇತೂರು ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಎಲೆಬೇತೂರು ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ದಾವಣಗೆರೆ, ಜೂ. 6 – ಎಲೆಬೇತೂರು ಗ್ರಾಮದ ಶ್ರೀ ಕೊಂಡಜ್ಜಿ ಬಸಪ್ಪ ಪ್ರೌಢಶಾಲೆ ಹಾಗೂ ಶ್ರೀ ತರಳಬಾಳು ಆಂಗ್ಲ ಮಾಧ್ಯಮ ಶಾಲೆ ಮತ್ತು ಸ್ಕೌಟ್ ಅಂಡ್ ಗೈಡ್ಸ್ ವಿದ್ಯಾರ್ಥಿಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಗಿಡ ನೆಟ್ಟು ನೀರು ಹಾಕುವುದರ ಮೂಲಕ ಆಚರಿಸಲಾಯಿತು. 

 ಶ್ರೀ ತರಳಬಾಳು ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ಎಚ್. ಬಸವರಾಜಪ್ಪ, ತಾಲ್ಲೂಕು ಕಸಾಪ ನಿರ್ದೇಶಕ ಹಾಗೂ ತರಳಬಾಳು ಶಾಲೆಯ  ನಿರ್ದೇಶಕ ಎಂ.ಷಡಕ್ಷರಪ್ಪ, ಎಚ್.ರಾಜಪ್ಪ, ಕೊಂಡಜ್ಜಿ ಬಸಪ್ಪ, ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಎಚ್.ಎಸ್.ಹಲಗಣ್ಣನವರ್, ಶ್ರೀ ತರಳಬಾಳು ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ಎಂ.ಬಿ.ಶಶಿಕಲಾ ಹಾಗೂ  ಇತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

error: Content is protected !!