ಮಾತೃದೇವೋ ಸಂಸ್ಥೆಯಿಂದ ವಿಶ್ವ ಪರಿಸರ ದಿನಾಚರಣೆ

ಮಾತೃದೇವೋ ಸಂಸ್ಥೆಯಿಂದ  ವಿಶ್ವ ಪರಿಸರ ದಿನಾಚರಣೆ

ದಾವಣಗೆರೆ, ಜೂ. 13- ನಗರದ ಮಾತೃದೇವೋ ಸಮಾಜ ಕಲ್ಯಾಣ ಮತ್ತು ಶೈಕ್ಷಣಿಕ ಚಾರಿಟಬಲ್ ಟ್ರಸ್ಟ್ ಹಾಗೂ ಹಸಿರು ದಳ ಸಂಸ್ಥೆಯ ಸಹಯೋಗದಲ್ಲಿ ವಿವೇಕಾನಂದ ಬಡಾವಣೆಯಲ್ಲಿರುವ ಒಣ ತ್ಯಾಜ್ಯ ಸಂಗ್ರ ಹಣಾ ಘಟಕದ ಆವರಣದಲ್ಲಿ ಸಸಿಗಳನ್ನು ನೆಡುವ ಮತ್ತು ನಾಗರಿಕರಿಗೆ ಸಸಿ ಗಳನ್ನು ವಿತರಿಸುವ ಮೂಲಕ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ಪೋತುಲ ಶ್ರೀನಿವಾಸ್, ಉಪಾಧ್ಯಕ್ಷ ಜಿ.ಎಸ್. ಪರಶುರಾಮ್, ಕಾರ್ಯದರ್ಶಿ ರಾಘವೇಂದ್ರ, ಖಜಾಂಚಿ ಕೊಟ್ರೇಶ್,  ರವಿತೇಜ್, ಚಂದ್ರಕಲಾ, ಹಸಿರು ದಳದ ಮಖ್ಯಸ್ಥರಾದ ಗುರುರಾಜ್, ನವೀನ್, ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು. 

error: Content is protected !!