ಜಿಲ್ಲಾ ಸರ್ಕಾರಿ ನಿವೃತ್ತ ನೌಕರರ ಸಂಘದ ಸಭೆ

ಜಿಲ್ಲಾ ಸರ್ಕಾರಿ ನಿವೃತ್ತ ನೌಕರರ ಸಂಘದ ಸಭೆ

ದಾವಣಗೆರೆ, ಜೂ.30 – ಜಿಲ್ಲಾ ಸರ್ಕಾರಿ ನಿವೃತ್ತ ನೌಕರರ ಸಂಘದ 54 ನೇ ವಾರ್ಷಿಕ ಮಹಾಸಭೆಯು ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ಸಂಘದ ಅಧ್ಯಕ್ಷ ಎ.ಆರ್. ಉಜ್ಜಿನಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆಯಿತು. ಸರ್ವ ಸದಸ್ಯರ ಸಭೆಯಲ್ಲಿ 2022-23 ರ ಕಾರ್ಯ ಚಟುವಟಿಕೆಗಳು ಮತ್ತು ಆರ್ಥಿಕ ವ್ಯವ ಹಾರಗಳ ಬಗ್ಗೆ ಚರ್ಚೆ ನಡೆಯಿತು. 75 ವರ್ಷಗಳನ್ನು ಪೂರೈಸಿದ ಸದಸ್ಯರುಗಳನ್ನು ಸನ್ಮಾನಿಸಲಾಯಿತು. 

ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷ ಡಾ. ಹೆಚ್.ಎಂ. ವೀರಯ್ಯ, ವಿಭಾಗೀಯ ಉಪಾಧ್ಯಕ್ಷ ಎಸ್.ಗುರುಮೂರ್ತಿ, ಕಾರ್ಯದರ್ಶಿ ಬಿ.ಕೆ. ರೇಣುಕಾಮೂರ್ತಿ, ನಿಕಟ ಪೂರ್ವ ಅಧ್ಯಕ್ಷ ಕೆ.ಜಿ. ಭರತರಾಜ್, ಕೆ.ದೇವೇಂದ್ರಪ್ಪ, ಬಿ.ದಿಳ್ಯಪ್ಪ, ಸಿ.ಜಿ. ಕಲ್ಲಪ್ಪ, ಬಿ.ಎಂ. ಮಲ್ಲಿಕಾರ್ಜುನಯ್ಯ, ಎನ್.ಜಿ. ಬಸವರಾಜ್, ಕೆ.ನಾಗಪ್ಪ, ಎನ್.ಮಹೇಶ್ವರಪ್ಪ ಹಾಗೂ ಇತರರು ಭಾಗವಹಿಸಿದ್ದರು.  

ಈ ಸಂದರ್ಭದಲ್ಲಿ ಡಾ.ಅಗರವಾಲ್ಸ್ ಕಣ್ಣಿನ ಆಸ್ಪತ್ರೆಯಿಂದ ಉಚಿತ ಚಿಕಿತ್ಸೆ ನಡೆಸಲಾಯಿತು. 

error: Content is protected !!