ದಾವಣಗೆರೆ, ಜು. 9- ವ್ಯಾಸ ಮಹರ್ಷಿಗಳ ಜನ್ಮ ದಿನ ಹಾಗೂ ಆಷಾಢ ಮಾಸದ ಮೊದಲ ಹುಣ್ಣಿಮೆಯ ದಿನದಂದು ನಗರದ ಶ್ರೀ ಸೋಮೇಶ್ವರ ಶಾಲೆಯಲ್ಲಿ ಗುರು ಪೂರ್ಣಿಮೆಯನ್ನು ಆಚರಿಸಲಾಯಿತು.
ಗಾಯತ್ರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಪ್ರಾಚಾರ್ಯರಾದ ಪ್ರಭಾವತಿ ಉಪಸ್ಥಿತರಿದ್ದು ಮಾತನಾಡಿದರು.
ಪೂರ್ವ ಪ್ರಾಥಮಿಕ ಹಂತದ ಮಕ್ಕಳು ವಿವಿಧ ರೀತಿಯ ಗುರುವರ್ಯರ ವೇಷಭೂಷಣ ಧರಿಸಿ ಗುರು ಒಬ್ಬ ಸರ್ವೋತ್ತಮ ಎಂಬುದನ್ನು ಸಾರಿದರೆ, ಶಾಲೆಯ 9 ಹಾಗೂ 10 ನೇ ತರಗತಿ ವಿದ್ಯಾರ್ಥಿನಿಯರು ಗುರು ಒಬ್ಬ ಸಾಕಾರಮೂರ್ತಿ ಎಂಬುದನ್ನು ತಮ್ಮ ಹಾಡಿನ ಮೂಲಕ ಮನರಂಜಿಸಿದರು. ಇನ್ನೂ 7ನೇ ತರಗತಿ ವಿದ್ಯಾರ್ಥಿನಿಯಾದ ಕು.ಶರಣ್ಯ ಎಂ.ವಿ. ಗುರುಪೂರ್ಣಿಮೆಯ ಮಹತ್ವ ಹಾಗೂ ಹಿನ್ನೆಲೆಯನ್ನು ತಿಳಿಸಿಕೊಟ್ಟರು.
ಆಡಳಿತಾಧಿಕಾರಿ ಹರೀಶ್ ಬಾಬು, ಮುಖ್ಯೋಪಾಧ್ಯಾಯರಾದ ಶ್ರೀಮತಿ ಮಾಲಾ, ಬೋಧಕ-ಬೋಧಕೇತರ ವರ್ಗದವರು ಉಪಸ್ಥಿತರಿದ್ದರು.