ಕಾಂಗ್ರೆಸ್ ಸರ್ಕಾರದಿಂದ ಕಟ್ಟಕಡೆಯ ವ್ಯಕ್ತಿಯು ಮುಂಚೂಣಿಗೆ

ಕಾಂಗ್ರೆಸ್ ಸರ್ಕಾರದಿಂದ ಕಟ್ಟಕಡೆಯ ವ್ಯಕ್ತಿಯು ಮುಂಚೂಣಿಗೆ

ರಾಣೇಬೆನ್ನೂರಿನ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಪ್ರಕಾಶ ಕೋಳಿವಾಡ

ರಾಣೇಬೆನ್ನೂರು, ಆ. 15-  76 ವರ್ಷ ಪೂರೈಸಿ 77 ರ ಸ್ವಾತಂತ್ರ್ಯದ ಸಂಭ್ರಮದಲ್ಲಿರುವ ನಾಡಿನ ಜನತೆಯ ಅಚ್ಚುಮೆಚ್ಚಿನ ಸರ್ಕಾರ ರಾಜ್ಯದಲ್ಲಿ ಬಂದಿದ್ದು ಬಡವರ, ದೀನ-ದಲಿತರ, ಹಿಂದುಳಿದವರ, ಅಲ್ಪಸಂಖ್ಯಾತರ ಹಾಗೂ ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ಮುಂಚೂಣಿಗೆ ತರುವ ಪ್ರಯತ್ನ ನಮ್ಮ ಸರ್ಕಾರದ್ದಾಗಿದೆ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.

ತಾಲ್ಲೂಕಾಡಳಿತದ ವತಿಯಿಂದ ನಗರಸಭೆ ಕ್ರೀಡಾಂಗಣದಲ್ಲಿ ತಹಶೀಲ್ದಾರ್ ಎಚ್.ಎನ್. ಶಿರಹಟ್ಟಿ ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶಾಸಕರು ಮಾತನಾಡಿದರು.

ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಭೀಮಪ್ಪ ಕುಡುಪಲಿ, ಮಾರ್ಕೆಟಿಂಗ್ ಸೊಸೈಟಿ ಅಧ್ಯಕ್ಷ ಯಲ್ಲರೆಡ್ಡಿ ರಡ್ಡೇರ, ಶಿಕ್ಷಣಾಧಿಕಾರಿ ಎಂ.ಎಚ್. ಪಾಟೀಲ, ನಗರಸಭೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ, ಪ್ರಕಾಶ ಪೂಜಾರ ಮತ್ತಿತರರಿದ್ದರು.

ವರ್ತಕರ ಸಂಘದಲ್ಲಿ ಅಧ್ಯಕ್ಷ ಜಿ.ಜಿ. ಹೊಟ್ಟಿಗೌಡ್ರ, ಕಾಂಗ್ರೆಸ್‌ ಕಛೇರಿಯಲ್ಲಿ ಅಧ್ಯಕ್ಷ ಮಂಜನಗೌಡ ಪಾಟೀಲ, ಜೆಡಿಎಸ್ ಕಛೇರಿಯಲ್ಲಿ ಮಂಜುನಾಥಗೌಡ ಶಿವಣ್ಣನವರ, ಬಿಜೆಪಿಯಲ್ಲಿ ಅಧ್ಯಕ್ಷ ಬಸವರಾಜ ಕೇಲಗಾರ, ಕರ್ನಾಟಕ ಸಂಘದಲ್ಲಿ ಅಧ್ಯಕ್ಷ ಸಂಜೀವ ಶಿರಹಟ್ಟಿ, ರಾಜರಾಜೇಶ್ವರಿ ಶಾಲೆಯಲ್ಲಿ ಅಧ್ಯಕ್ಷ ವಿ.ಪಿ. ಲಿಂಗನಗೌಡ್ರ ಧ್ವಜಾರೋಹಣ ನೆರವೇರಿಸಿದರು.

ಅಶೋಕ ಸರ್ಕಲ್‌ನಲ್ಲಿ ನಗರಸಭೆ ಆಡಳಿತಾಧಿಕಾರಿ ಮಮತಾ ಹೊಸಗೌಡ್ರ, ನಗರಸಭೆಯಲ್ಲಿ ಪೌರಾಯುಕ್ತ ನಿಂಗಪ್ಪ ಕುಮ್ಮಣ್ಣನವರ, ಕೃಷಿ ಇಲಾಖೆಯಲ್ಲಿ ಸಹಾಯಕ ನಿರ್ದೇಶಕ ಹಿತೇಂದ್ರ ಗೌಡಪ್ಪಳವರ,  ಸಾರ್ವಜನಿಕ ಆಸ್ಪತ್ರೆಯಲ್ಲಿ ಡಾ. ರಾಜೇಶ್ವರಿ, ತಾಪಂನಲ್ಲಿ ಈಓ ಸುಮಲತಾ ಎಸ್.ಪಿ,  ಧ್ವಜಾರೋಹಣ ನೆರವೇರಿಸಿದರು.

error: Content is protected !!