ದಾವಣಗೆರೆ, ಆ. 22 – ಸುವರ್ಣ ಕರ್ನಾಟಕ ವೇದಿಕೆ ಹಾಗೂ ಎಸ್.ಜೆ.ಎಂ. ಪಬ್ಲಿಕ್ ಶಾಲೆ ಸಹಯೋಗದೊಂದಿಗೆ 77ನೇ ಸ್ವಾತಂತ್ರ್ಯೋತ್ಸವವನ್ನು ಶಾಲಾ ಆವರಣದಲ್ಲಿ ಧ್ವಜಾರೋಹಣ ನೆರವೇರಿಸುವ ಮೂಲಕ ಆಚರಿಸಲಾಯಿತು. ಕೆಟಿಜೆ ನಗರದ ಪೊಲೀಸ್ ಠಾಣೆಯ ಮುಖ್ಯಪೇದೆ ಜೆ.ಎನ್. ಮಂಜುನಾಥ್ ಮತ್ತು ಅಂತರರಾಷ್ಟ್ರೀಯ ಯೋಗ ಪಟು ಎನ್. ಪರಶುರಾಮಪ್ಪ ಅವರನ್ನು ಸನ್ಮಾನಿಸಲಾಯಿತು. ಸುವರ್ಣ ಕರ್ನಾಟಕ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಸಂತೋಷ್ ಕುಮಾರ್, ರಾಜ್ಯ ಕಾರ್ಯದರ್ಶಿ ಮಹಾಂತೇಶ್ .ವಿ ಒಣರೊಟ್ಟಿ, ಶಾಲೆಯ ವ್ಯವಸ್ಥಾಪಕ ಮಹೇಶ್ವರಪ್ಪ, ಪುಷ್ಪವತಿ, ಕಾಂಗ್ರೆಸ್ ಯುವ ಮುಖಂಡ ಪ್ರವೀಣ್ ಶಾಂತಕುಮಾರ್ ದೊಡ್ಮನಿ , ಟಿ. ಮಲ್ಲಿಕಾರ್ಜುನ್ ಮತ್ತು ಇತರರು ಭಾಗವಹಿಸಿದ್ದರು.
ಸುವರ್ಣ ಕರ್ನಾಟಕ ವೇದಿಕೆಯಿಂದ ಸ್ವಾತಂತ್ರ್ಯೋತ್ಸವ
![30 suvarnakarnataka 23.08.2023 ಸುವರ್ಣ ಕರ್ನಾಟಕ ವೇದಿಕೆಯಿಂದ ಸ್ವಾತಂತ್ರ್ಯೋತ್ಸವ](https://janathavani.com/wp-content/uploads/2023/08/30-suvarnakarnataka-23.08.2023-860x395.jpg)