ಶ್ರೀ ಗುರು ಕರಿಬಸವೇಶ್ವರ ಸ್ವಾಮಿ ಗೋಪುರದ ಕಳಸಾರೋಹಣ ಕಾರ್ಯಕ್ರಮ

ಶ್ರೀ ಗುರು ಕರಿಬಸವೇಶ್ವರ ಸ್ವಾಮಿ ಗೋಪುರದ ಕಳಸಾರೋಹಣ ಕಾರ್ಯಕ್ರಮ

ದಾವಣಗೆರೆ, ಆ. 27- ನಗರದ ಹೊಂಡದ ವೃತ್ತದಲ್ಲಿರುವ ಶ್ರೀ ಗುರು ಕರಿಬಸವೇಶ್ವರ ಸ್ವಾಮಿಯ ಗೋಪುರದ ಕಳಸಾರೋಹಣ ಧಾರ್ಮಿಕ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್,  ಶಾಸಕ ಶಾಮನೂರು ಶಿವಶಂಕರಪ್ಪ ಭಾಗವಹಿಸಿ, ವಿಶೇಷ ಪೂಜೆ ಸಲ್ಲಿಸಿದರು.

ಶ್ರೀ ಗುರು ಕರಿಬಸವೇಶ್ವರ ಸ್ವಾಮಿ ಗೋಪುರದ ಕಳಸಾರೋಹಣ ಕಾರ್ಯಕ್ರಮ - Janathavani

ಆವರಗೊಳ್ಳದ ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿದ್ದರು. ಮುಖಂಡರುಗಳಾದ ಡಿ.ಮಾಲತೇಶ್ ರಾವ್ ಜಾಧವ್, ಪಾಲಿಕೆ ಮೇಯರ್ ವಿನಾಯಕ ಪೈಲ್ವಾನ್, ದಿನೇಶ್ ಕೆ ಶೆಟ್ಟಿ ಸೇರಿದಂತೆ, ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಭಕ್ತರು ಉಪಸ್ಥಿತರಿದ್ದರು.

error: Content is protected !!