ಉಸ್ತುವಾರಿ ಕಾರ್ಯದರ್ಶಿ ಗುಂಜನ್ ಕೃಷ್ಣ ಕ್ಷೇತ್ರ ಭೇಟಿ : ಬೆಳೆಹಾನಿ ವೀಕ್ಷಣೆ, ಮಕ್ಕಳೊಂದಿಗೆ ಸಂವಾದ

ಉಸ್ತುವಾರಿ ಕಾರ್ಯದರ್ಶಿ ಗುಂಜನ್ ಕೃಷ್ಣ ಕ್ಷೇತ್ರ  ಭೇಟಿ : ಬೆಳೆಹಾನಿ ವೀಕ್ಷಣೆ, ಮಕ್ಕಳೊಂದಿಗೆ ಸಂವಾದ

ದಾವಣಗೆರೆ, ಆ. 28 –  ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಗುಂಜನ್ ಕೃಷ್ಣ ಹಾಗೂ ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ಆನಗೋಡು ಹೋಬಳಿಯಲ್ಲಿ ರೈತರ ಸಮ್ಮುಖದಲ್ಲಿ ಬೆಳೆಹಾನಿ ವೀಕ್ಷಣೆ ಮಾಡಿ ರೈತರಿಂದ ಅಹವಾಲು ಸ್ವೀಕರಿಸಿದರು. ಆಗಸ್ಟ್ ತಿಂಗಳಲ್ಲಿ ಮಳೆ ಕೊರತೆಯಿಂದ ಬೆಳೆಗಳು ಒಣಗುತ್ತಿದ್ದು ಮೆಕ್ಕೆಜೋಳ ಸಂಪೂರ್ಣ ಬಾಡಿ ಹೋಗಿವೆ. ಈ ವೇಳೆ ರೈತರು ತಮಗಾದ ನಷ್ಟದ ಬಗ್ಗೆ ಅಹವಾಲು ತಿಳಿಸಿದರು. 

ವಸತಿ ಶಾಲೆಗೆ ಭೇಟಿ – ದಾವಣಗೆರೆ ತಾಲ್ಲೂಕಿನ ವಡೇರಹಳ್ಳಿ ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿ ಗಳೊಂದಿಗೆ ಸಂವಾದ ನಡೆಸಿ ಶೈಕ್ಷಣಿಕ ಚಟುವ ಟಿಕೆ ಮತ್ತು ಶಾಲೆಯ ಸ್ವಚ್ಛತೆ ಪರಿಶೀಲಿಸಿದರು.

ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ – ಆನಗೋಡು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಔಷಧ ದಾಸ್ತಾನು ಕೊಠಡಿ ವೀಕ್ಷಿಸಿ ಚಿಕಿತ್ಸೆ ನೀಡುತ್ತಿರುವ ಬಗ್ಗೆ ಪರಿಶೀಲನೆ ನಡೆಸಿದರು. 

error: Content is protected !!