ನಂದಗೋಕುಲ ಶಾಲಾ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮ

ನಂದಗೋಕುಲ ಶಾಲಾ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮ

ದಾವಣಗೆರೆ, ಆ. 31- ಶ್ರೀ ಮಾತಾ ವಿದ್ಯಾಸಂಸ್ಥೆ ನಂದಗೋಕುಲ ನರ್ಸರಿ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಮಕ್ಕಳಿಗೆ ಕಾನೂನು ಅರಿವು ಕಾರ್ಯಕ್ರಮ ಏರ್ಪಡಿಸಲಾಗಿತ್ತು. 

ಅತಿಥಿಗಳಾಗಿ ವಕೀಲರಾದ ಕು. ಆಶಾ ಆಗಮಿಸಿ ವಿದ್ಯಾರ್ಥಿಗಳಿಗೆ ಕಾನೂನುಗಳು ಹಾಗೂ ನಿಯಮಗಳ ಬಗ್ಗೆ ಅರಿವು ಮೂಡಿಸಿದರು.

ಶಾಲೆಯ ಕಾರ್ಯದರ್ಶಿ ಶ್ರೀಮತಿ ಬಿ. ಅನುಸೂಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯೋಪಾಧ್ಯಾಯರಾದ ಶ್ರೀಮತಿ ರೆಹಾನಬಾನು ನಾಸಿಕ ಉಪಸ್ಥಿತರಿದ್ದರು. ಶಿಕ್ಷಕರಾದ ಲೋಕೇಶ್, ನವೀನ್, ಶಿಕ್ಷಕಿ ಸಲ್ಮಾ ತಾಜ್ ಉಪಸ್ಥಿತರಿದ್ದರು.

error: Content is protected !!