ಮಲೇಬೆನ್ನೂರು, ಸೆ. 5- ಸುಕ್ಷೇತ್ರ ಉಕ್ಕಡಗಾತ್ರಿ ಯಲ್ಲಿ ಪವಾಡ ಪುರುಷ ಶ್ರೀ ಗುರು ಕರಿಬಸವೇಶ್ವರ ಅಜ್ಜಯ್ಯನ ಪುಣ್ಯಾರಾಧನೆ ಹಾಗೂ ಶ್ರಾವಣ ಮಾಸದ ಅಂಗವಾಗಿ ಅಜ್ಜಯ್ಯನ ಬೆಳ್ಳಿ ರಥೋತ್ಸವವು ನಿನ್ನೆ ಸಂಭ್ರಮದಿಂದ ಜರುಗಿತು. ನಂದಿಗುಡಿ ಬೃಹನ್ಮಠದ ಶ್ರೀ ಸಿದ್ದರಾಮೇಶ್ವರ ಶಿವಾಚಾರ್ಯ ಸ್ವಾಮೀಜಿ ರಥಕ್ಕೆ ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು.
ಲೋಕ ಕಲ್ಯಾಣಾರ್ಥವಾಗಿ ನಡೆಸಿದ ಗಣ ಹೋಮ, ರುದ್ರಹೋಮಗಳಿಗೆ ಶ್ರೀ ಸಿದ್ದರಾಮೇಶ್ವರ ಶಿವಾಚಾರ್ಯ ಸ್ವಾಮೀಜಿ ಪೂರ್ಣಾಹುತಿ ಅರ್ಪಿಸಿದರು.
ರಾತ್ರಿ ಅಜ್ಜಯ್ಯನ ಪಾಲಿಕೋತ್ಸವವು ಭಾರೀ ಹೂವಿನ ಅಲಂಕಾರದೊಂದಿಗೆ ವಿಜೃಂಭಣೆಯಿಂದ ನಡೆಯಿತು. ಗದ್ದುಗೆ ಟ್ರಸ್ಟ್ ಕಮಿಟಿ ಕಾರ್ಯದರ್ಶಿ ಎಸ್. ಸುರೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.