ಶ್ರೀ ಸೋಮೇಶ್ವರ ವಿದ್ಯಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ಶ್ರೀ ಸೋಮೇಶ್ವರ ವಿದ್ಯಾಲಯದಲ್ಲಿ  ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ದಾವಣಗೆರೆ, ಸೆ.10- ನಗರದ ಪ್ರತಿಷ್ಟಿತ ವಿದ್ಯಾಸಂಸ್ಥೆಗಳಲ್ಲಿ ಒಂದಾದ ಶ್ರೀ ಸೋಮೇಶ್ವರ ವಿದ್ಯಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ನಡೆಯಿತು. ಪೋಷಕರ ಅಮೋಘ ಸಹಕಾರದೊಂದಿಗೆ ನಡೆದ ಈ ಕಾರ್ಯಕ್ರಮದಲ್ಲಿ ಮುದ್ದಾದ ಮಕ್ಕಳು ರಾಧೆ, ಕೃಷ್ಣನ ವೇಷದೊಂದಿಗೆ ಶಾಲೆಗೆ ಆಗಮಿಸಿ ಎಲ್ಲರ ಗಮನ ಸೆಳೆದರು. 

ರಾಧೆಯಾದ ವಿದ್ಯಾರ್ಥಿನಿಯರಿಗೆ ಕೃಷ್ಣನ ಪಾತ್ರದಲ್ಲಿ ಬಂದ ವಿದ್ಯಾರ್ಥಿಗಳು ಸಾಥ್ ನೀಡಿದರು. ಶ್ರೀ ಕೃಷ್ಣನ ಹಲವು ಹಾಡುಗಳಿಗೆ ಹೆಜ್ಜೆ ಹಾಕುವ ಮೂಲಕ ಶ್ರೀ ಕೃಷ್ಣನನ್ನು ಸ್ಮರಿಸಿದರು. ಪುಟ್ಟ ಪಟಾಣಿಗಳು ಶ್ರೀ ಕೃಷ್ಣನಂತೆ ಕಂಗೊಳಿಸುವ ಮೂಲಕ ಶಾಲಾ ವಾತಾವರಣವೇ ಹಬ್ಬದಂತೆ ಮಾರ್ಪಟ್ಟಿತ್ತು.  ಹಿರಿಯ ಶಿಕ್ಷಕಿ ಶ್ರೀಮತಿ ರೂಪರಾಣಿ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಪೋಷಕರಾದ ಶ್ರೀಮತಿ ಮಮತಾ ಹಾಗೂ ಶ್ರೀಮತಿ ಮಂಗಳ ಗೌರಿ ಆಗಮಿಸಿದ್ದರು. 

ಕಾರ್ಯಕ್ರಮದಲ್ಲಿ ಸಂಸ್ಥೆಯ ಸಂಸ್ಥಾಪಕರು ಹಾಗು ಗೌರವ ಕಾರ್ಯದರ್ಶಿ ಕೆ.ಎಂ ಸುರೇಶ್, ಪ್ರಾಂಶುಪಾಲರಾದ ಶ್ರೀಮತಿ ಪ್ರಭಾವತಿ, ಆಡಳಿತಾಧಿಕಾರಿ ಹರೀಶ್ ಬಾಬು, ಮುಖ್ಯೋಪಾಧ್ಯಾಯ ಪ್ರಕಾಶ್, ಶ್ರೀಮತಿ ಗಾಯತ್ರಿ, ಶ್ರೀಮತಿ ಮಾಲಾ ಸೇರಿದಂತೆ ಇತರರು ಉಪಸ್ಥಿತರಿದ್ದರು.

error: Content is protected !!