ಹೊಳೆಸಿರಿಗೆರೆ ಇಂದ್ರಧನುಷ್ 5.0 ಅಭಿಯಾನ ಕಾರ್ಯಕ್ರಮ

ಹೊಳೆಸಿರಿಗೆರೆ  ಇಂದ್ರಧನುಷ್ 5.0 ಅಭಿಯಾನ ಕಾರ್ಯಕ್ರಮ

ಮಲೇಬೆನ್ನೂರು, ಸೆ.12- ಹೊಳೆಸಿರಿಗೆರೆ ಗ್ರಾಮದ ಅಂಗನವಾಡಿ  `ಎ’  ಕೇಂದ್ರದಲ್ಲಿ  ತೀವ್ರ ತರವಾದ ಮಿಷನ್ ಇಂದ್ರಧನುಷ್ 5.0 ಅಭಿಯಾನ ಕಾರ್ಯಕ್ರಮವನ್ನು ಸೋಮವಾರ ಏರ್ಪಡಿಸಲಾಗಿತ್ತು.

ಈ ವೇಳೆ ಮಕ್ಕಳಿಗೆ ಲಸಿಕೆ ಹಾಕಲಾಯಿತು. ಪ್ರಾಥಮಿಕ ಆರೋಗ್ಯ ಕೇಂದ್ರದ ಸುರಕ್ಷಣಾಧಿಕಾರಿ ಆಶಾರಾಣಿ, ಆಶಾ ಕಾರ್ಯಕರ್ತರಾದ ಮಾಲಾಶ್ರೀ, ನೀಲಾಂಬಿಕೆ, ಕಸ್ತೂರಿಬಾಯಿ, ಪುಷ್ಪಾವತಿ, ಶಶಿಕಲಾ ಹಾಗೂ ಅಂಗನವಾಡಿ ಕಾರ್ಯಕರ್ತೆ ಮಂಜಮ್ಮ ಮತ್ತು  ಮಕ್ಕಳು, ತಾಯಂದಿರು, ಗರ್ಭಿಣಿಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

error: Content is protected !!