ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ಮಾನವೀಯ ಮೌಲ್ಯ ಬೆಳೆಸಿಕೊಳ್ಳಿ

ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ಮಾನವೀಯ ಮೌಲ್ಯ ಬೆಳೆಸಿಕೊಳ್ಳಿ

ಹಳೇ ಕುಂದುವಾಡದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಶಾಸಕ ಬಸವಂತಪ್ಪ ಕರೆ 

ದಾವಣಗೆರೆ, ಸೆ. 26 – ನಗರದ ಹಳೇ ಕುಂದುವಾಡದಲ್ಲಿ ಮನಾ ಯುವ ಬ್ರಿಗೇಡ್, ಜನತಾ ರಕ್ಷಣಾ ವೇದಿಕೆಯ ಆರನೇ ವಾರ್ಷಿಕೋತ್ಸವ ಬೆಳ್ಳಿ ಕಪ್ ಪ್ರಶಸ್ತಿ ಪ್ರದಾನ ಸಮಾರಂಭ, ಸರ್ಕಾರಿ ಶಾಲೆ, ಕಾಲೇಜಿನ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಟಾಪರ್ ಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಹಮ್ಮಿಕೊಳ್ಳಲಾಗಿತ್ತು..

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡುವುದು ಮಹತ್ವದ ಕೆಲಸವಾಗಿದೆ, ವಿದ್ಯಾರ್ಥಿಗಳಿಗೆ ಪ್ರೇರಣೆ ತುಂಬುವುದು ಅವಶ್ಯಕವಾಗಿದೆ. 

ವಿದ್ಯಾಭ್ಯಾಸಕ್ಕೆ ಹೆಚ್ಚು ಮಹತ್ವ ಕೊಡಬೇಕಿದೆ, ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ಮಾನವೀಯ ಮೌಲ್ಯ ಬೆಳೆಸಿಕೊಳ್ಳಬೇಕು, ಎಷ್ಟೇ ಡಿಗ್ರಿಗಳನ್ನು ಓದಿದವರು, ಮಾನವೀಯತೆ ಸಹಾಯ ಗುಣ ಇಲ್ಲ ಎಂದರೆ ಉಪಯೋಗವಿಲ್ಲ ಎಂದು ಕಿವಿ ಮಾತು ಹೇಳಿದರು.

ನಾನು ಕುಂದುವಾಡ ಮಣ್ಣಿನ ಮಗ : ನಾನು ಹಳೇ ಕುಂದುವಾಡದ ಮಣ್ಣಿನ ಮಗ, ನನ್ನದು ಮೂಲತಃ ಇದೇ ಊರು, ನಾವು ಹುಟ್ಟಿ ಬೆಳೆದಿದ್ದು ಇದೇ ಊರಿನಲ್ಲಿ, ಬಳಿಕ ಗಾಂಧಿ ನಗರಕ್ಕೆ ಹೋದೆವು, ನನ್ನ ಹೆಸರು ಕೆ.ಎಸ್. ಬಸವಂತಪ್ಪ, ಕೆ. ಎಂದರೆ ಕುಂದುವಾಡ, ಎಸ್.ಎಂದರೆ ನಮ್ಮ ತಂದೆಯ ಹೆಸರು ಸಂಗಪ್ಪ, ಮಾಜಿ ಸಚಿವ ಹೆಚ್. ಆಂಜನೇಯ ನನ್ನ ಮಾವ, ಹೆಚ್ ಆಂಜನೇಯ ಅವರು ಹಳೇ ಕುಂದುವಾಡದಲ್ಲಿ ಶಾಲೆ ಆರಂಭಿಸಿದ್ದರು, ಸೈಕಲ್‌ನಲ್ಲಿ
ಬಂದು ಶಾಲೆ ನಡೆಸುತ್ತಿದ್ದರು, ಇನ್ನೂ ನನ್ನ
ಹುಟ್ಟೂರು ಕುಂದುವಾಡಕ್ಕೆ ಬರಬೇಕು ಅಂದುಕೊಂಡಿದ್ದೆ, ಮನಾ ಯುವ ಬ್ರಿಗೇಡ್ ವೇದಿಕೆಯವರು ನನ್ನನ್ನೂ ಕರೆಯಿಸಿ ಗೌರವಿಸಿದ್ದು ಮರೆಯಲಾಗದ ಕ್ಷಣ ಎಂದು ಹಳೇ ನೆನಪು ಮೆಲುಕು ಹಾಕಿದರು.

ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಲೋಕಿಕೆರೆ ನಾಗರಾಜ್,  ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಶ್ರೀನಿವಾಸ್ ದಾಸ ಕರಿಯಪ್ಪ ಅವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಸರ್ಕಾರಿ ಶಾಲೆ, ಕಾಲೇಜಿನ ಎಸ್ ಎಸ್ ಎಲ್ ಸಿ, ಪಿಯುಸಿ 36 ಟಾಪರ್‌ಗಳಿಗೆ ಸನ್ಮಾನಿಸಿ ಗೌರವಿಸಲಾಯಿತು, ಬೆಳ್ಳಿ ಕಪ್ ವಿತರಣೆ ಸಮಾರಂಭ ನಡೆಯಿತು, ಪವರ್ ಫೈಟರ್ಸ್ ಪ್ರಥಮ, ಕುಂದುವಾಡ ಯೋದಾಸ್ ತಂಡ ದ್ವಿತೀಯ, ಆರ್ ಎಕ್ಸ್ ಟಗರು ತಂಡ ತೃತೀಯ ಬಹುಮಾನ ಸ್ವೀಕಾರ ಮಾಡಿತು.

ವೇದಿಕೆ ಅಧ್ಯಕ್ಷ ಮಧುನಾಗರಾಜ್ ಕುಂದುವಾಡ ಅಧ್ಯಕ್ಷತೆ ವಹಿಸಿದ್ದರು, ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ವಿಪಕ್ಷ ನಾಯಕ ಪ್ರಸನ್ನ ಕುಮಾರ್, ಮಾಜಿ ಕಾರ್ಪೊರೇಟರ್, ಹೆಚ್. ತಿಪ್ಪಣ್ಣ, ಮಾಜಿ ಮೇಯರ್ ಹೆಚ್.ಎನ್. ಗುರುನಾಥ್, ಎಪಿಎಂಸಿ ಮಾಜಿ ಅಧ್ಯಕ್ಷ ಹೆಚ್.ಜಿ. ಗಣೇಶಪ್ಪ, ಮುಖಂಡರಾದ ಲೋಕಿಕೆರೆ ಮಂಜುನಾಥ್, ಸಣ್ಣಿಂಗಪ್ಪ, ಮಲ್ಲಿಕಾರ್ಜುನ್, ಕೆಂಪು ನಿಂಗಪ್ಪರ ಮಂಜಪ್ಪ, ಬೆಳ್ಳೂಡಿ ಮಂಜಪ್ಪ, ಬಾರಿಕರ ಚಂದ್ರಪ್ಪ, ನರಸಪ್ಪರ ಶಿವಪ್ಪ, ನರಸಪ್ಪರ ಲಿಂಗರಾಜ್, ಸಂಪತ್ ಕುಮಾರ್, ಪ್ರಭು, ಬೆಳ್ಳೂಡಿ ಕುಮಾರ್, ಡಿಜಿ ಪ್ರಕಾಶ್, ರಾಜು ಕರೂರು, ನಾಗರಾಜ್ ಎಸ್ ಬಿ, ಸಿದ್ದಲಿಂಗಪ್ಪ, ಹನುಮಂತಪ್ಪ, ಅಂಗಡಿ ಸಂಗಪ್ಪ, ಅಣ್ಣಪ್ಪ, ಕರಿಬಸವರಾಜ್ ಸೇರಿದಂತೆ ಮತ್ತಿತರರಿದ್ದರು.

error: Content is protected !!