ನಗರದ ಹಿರಿಯ ಛಾಯಾಗ್ರಾಹಕ ಎಸ್.ಶಿವಮೂರ್ತಿ ಅವರಿಗೆ ಸನ್ಮಾನ

ನಗರದ ಹಿರಿಯ ಛಾಯಾಗ್ರಾಹಕ  ಎಸ್.ಶಿವಮೂರ್ತಿ ಅವರಿಗೆ ಸನ್ಮಾನ

ದಾವಣಗೆರೆ, ಅ. 1- ಜಿಲ್ಲಾ ಫೋಟೋಗ್ರಾಪರ್‌ ಮತ್ತು ವೀಡಿಯೋ ಗ್ರಾಫರ್‌ ಸಂಘ ಮತ್ತು ಫೋಟೋಗ್ರಾಫರ್‌ ಯೂತ್ ವೆಲ್ ಫೇರ್ ಅಸೋಸಿಯೇಷನ್ ಇವರ ಜಂಟಿ ಆಶ್ರಯದಲ್ಲಿ ನಗರದ ಕಮ್ಮಾವಾರಿ ಸಮುದಾಯ ಭವನದಲ್ಲಿ ಮೊನ್ನೆ ಏರ್ಪಾಡಾಗಿದ್ದ ವಿಶ್ವ ಛಾಯಾಗ್ರಹಣ ದಿನಾಚರಣೆ ಕಾರ್ಯಕ್ರಮದಲ್ಲಿ ಹಿರಿಯ ಛಾಯಾಗ್ರಾಹಕ ಸುರಭಿ ಸ್ಟುಡಿ ಯೋದ ಎಸ್.ಶಿವಮೂರ್ತಿ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್, ಕರ್ನಾಟಕ ರಾಜ್ಯ ವೃತ್ತಿಪರ ಛಾಯಾಗ್ರಾಹಕರ ಸಂಘಗಳ ಒಕ್ಕೂಟದ ಜಿಲ್ಲಾಧ್ಯಕ್ಷ ವಿಲ್ಸನ್ ಗೊನ್ಸಾಲ್ವಿಸ್ ಅವರುಗಳು ಶಿವಮೂರ್ತಿ ಅವರನ್ನು ಸನ್ಮಾನಿಸಿದರು.

ಕರ್ನಾಟಕ ಛಾಯಾಗ್ರಾಹಕರ ಸಂಘದ ರಾಜ್ಯ ಉಪಾಧ್ಯಕ್ಷ ಹೆಚ್.ಎಸ್. ನಾಗೇಶ್, ದೂಡಾ ಮಾಜಿ ಅಧ್ಯಕ್ಷ ದೇವರಮನಿ ಶಿವಕುಮಾರ್, ದಾವಣಗೆರೆ ಜಿಲ್ಲಾ ಫೋಟೋಗ್ರಾಫರ್‌ ಮತ್ತು ವೀಡಿಯೋಗ್ರಾಫರ್‌ ಸಂಘದ ಅಧ್ಯಕ್ಷ ವಿಜಯ್ ಕುಮಾರ್
ಜಾಧವ್, ದಾವಣಗೆರೆ ಛಾಯಾಗ್ರಹಕರ ಸಹಕಾರ ಸಂಘದ ಅಧ್ಯಕ್ಷ ಎಸ್. ತಿಪ್ಪೇಸ್ವಾಮಿ, ಫೋಟೋಗ್ರಾಫರ್‌ ಯೂತ್ ವೆಲ್ ಫೇರ್ ಅಸೋಸಿಯೇಷನ್ ಕಾರ್ಯದರ್ಶಿ ಎಸ್. ದುಗ್ಗಪ್ಪ ಉಪಸ್ಥಿತರಿದ್ದರು.

error: Content is protected !!