ಕುರ್ಕಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಅಭಿವೃದ್ಧಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಕೊಡುಗೆ

ಕುರ್ಕಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಅಭಿವೃದ್ಧಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಕೊಡುಗೆ

ದಾವಣಗೆರೆ, ಅ.4- ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ದೇವನಗರಿ ಯೋಜನೆ ಕಚೇರಿ ವ್ಯಾಪ್ತಿಯಲ್ಲಿ ಬರುವ ಕುರ್ಕಿ ವಲಯದ ಕುರ್ಕಿ ಗ್ರಾಮದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಅಭಿವೃದ್ಧಿಗಾಗಿ ಶ್ರೀ ಕ್ಷೇತ್ರದ ವತಿಯಿಂದ 1,50,000 ರೂ. ಮೊತ್ತದ ಡಿ.ಡಿ.ಯನ್ನು ಬಾಡಾ ವಲಯದ  ಮೇಲ್ವಿಚಾರಕರಾದ ಈರಣ್ಣ ಅವರು, ದೇವಸ್ಥಾನದ ಅಧ್ಯಕ್ಷರಾದ ನಟರಾಜ ಕೆ.ಎನ್‌. ಅವರಿಗೆ ವಿತರಿಸಿದರು. 

ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕ ಲಕ್ಷ್ಮಣ, ದೇವಸ್ಥಾನ ಕಮಿಟಿಯ  ಪದಾಧಿಕಾರಿಗಳು ಮತ್ತು ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು, ಸೇವಾಪ್ರತಿನಿಧಿ ಮಂಜುಳಾ  ಮತ್ತು ಇತರರು ಉಪಸ್ಥಿತರಿದ್ದರು.

error: Content is protected !!