ರಾಷ್ಟ್ರೀಯ ಚುಚ್ಚುಮದ್ದು ಕಾರ್ಯಕ್ರಮ

ರಾಷ್ಟ್ರೀಯ ಚುಚ್ಚುಮದ್ದು ಕಾರ್ಯಕ್ರಮ

ಮಲೇಬೆನ್ನೂರು, ಅ. 8- ದೇವರಬೆಳಕೆರೆ  ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಬರುವ  ಗುಳದಹಳ್ಳಿ ಉಪ ಕೇಂದ್ರದ ಮಲ್ಲನಾಯಕನಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಶನಿವಾರ ರಾಷ್ಟ್ರೀಯ ಚುಚ್ಚುಮದ್ದು ಕಾರ್ಯಕ್ರಮ ನಡೆಸಲಾಯಿತು. 

ನಾಳೆ ದಿನಾಂಕ 9 ರಿಂದ 14 ರವರೆಗೆ ನಡೆಯುವ ಮಿಷನ್ ಇಂದ್ರ ಧನುಷ್ ಮೂರನೇ ಸುತ್ತಿನ ಕಾರ್ಯಕ್ರಮದ ಬಗ್ಗೆ ತಾ, ಹಿರಿಯ ಆರೋಗ್ಯ ಮೇಲ್ವಿಚಾರಕಿ ಸುಧಾ ಸುಲಕೆ  ಮಾತನಾಡಿ, ಯಾವುದೇ ಮಗು ಲಸಿಕೆಯಿಂದ ವಂಚಿತರಾಗದಂತೆ ಪರಿಪೂರ್ಣ ಲಸಿಕೆ ಪಡೆಯುವಂತೆ ತಿಳಿಸಿದರು. ಅದರಲ್ಲೂ ಮುಖ್ಯವಾಗಿ ವಲಸೆ ಹೋದಂತಹ ಗರ್ಭಿಣಿ ಹಾಗೂ ಮಕ್ಕಳಿಗೆ ಸಂಪೂರ್ಣವಾಗಿ ಲಸಿಕೆ ಪಡೆಯುವಂತೆ ಆರೋಗ್ಯ ಶಿಕ್ಷಣ ನೀಡಲಾಗುವುದು ಎಂದು ತಿಳಿಸಿದರು.

ತಾ. ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಎಂ. ಉಮ್ಮಣ್ಣ ಮಾತನಾಡಿದರು. ಪ್ರಾಥಮಿಕ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಲಕ್ಷ್ಮಿದೇವಿ, ಆದರ್ಶ, ಸಹಾಯಕ ಆರೋಗ್ಯ ಅಧಿಕಾರಿ ಮಹಮದ್ ಇಮ್ರಾನ್, ಆಶಾ ಕಾರ್ಯಕರ್ತೆ ಭಾಗೀರಥಿ, ಅಂಗನವಾಡಿ ಕಾರ್ಯಕರ್ತೆ ಉಮಾವತಿ ಮತ್ತು ಇತರರು ಕಾರ್ಯಕ್ರಮದಲ್ಲಿ  ಹಾಜರಿದ್ದರು.

error: Content is protected !!