ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ಸ್ವಚ್ಛತಾ ಕಾರ್ಯ

ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ಸ್ವಚ್ಛತಾ ಕಾರ್ಯ

ದಾವಣಗೆರೆ, ಅ. 9- ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಜಿ ಜನ್ಮ ದಿನದ ಅಂಗವಾಗಿ  ಜಿಲ್ಲಾ ನ್ಯಾಯಾಲಯದ ಹಾಗೂ ಎಲ್ಲಾ ನ್ಯಾಯಾಲಯಗಳ ವ್ಯಾಪ್ತಿಗಳಲ್ಲಿ ಕಳೆದ ಒಂದು ವಾರದಿಂದ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ಡಿ.ದೇವರಾಜು ಅರಸು ಕಾಲೋನಿಯಲ್ಲಿರುವ ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣದಲ್ಲಿ ಸ್ವಚ್ಛತಾ  ಕಾರ್ಯಕ್ರಮವನ್ನು ಹಮ್ಮಿಕೊಂಡು, ನ್ಯಾಯಾಲಯದ ಆವರಣವನ್ನು ಸ್ವಚ್ಚತೆ ಮಾಡಿ ಕಸ, ಕಡ್ಡಿಯನ್ನು ಆಯ್ದು ಸಂಪೂರ್ಣ ಆವರಣವನ್ನು ಸ್ವಚ್ಚಗೊಳಿಸಿ ಸ್ವಚ್ಚತಾ ಅರಿವು ಮೂಡಿಸಲಾಯಿತು. ಸ್ವಚ್ಚತಾ ಕಾರ್ಯದಲ್ಲಿ ತೊಡಗಿದ ನ್ಯಾಯಾಲಯದ ಸಿಬ್ಬಂದಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.  ಈ ಸಂದರ್ಭದಲ್ಲಿ  ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ ಎನ್ ಹೆಗಡೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ. ಕರೆಣ್ಣವರ ಹಾಗೂ ಜಿಲ್ಲೆಯ ಎಲ್ಲಾ ಜಿಲ್ಲಾ ನ್ಯಾಯಾಧೀಶರುಗಳು ಮತ್ತು ಹಿರಿಯ ಸಿವಿಲ್ ನ್ಯಾಯಾಧೀಶರು ಉಪಸ್ಥಿತರಿದ್ದರು.

error: Content is protected !!