ಎಂ.ಬಿ ಕಾಲೇಜಿನಲ್ಲಿ ಗಾಂಧಿ-ಶಾಸ್ತ್ರಿ ಜಯಂತಿ

ಎಂ.ಬಿ ಕಾಲೇಜಿನಲ್ಲಿ ಗಾಂಧಿ-ಶಾಸ್ತ್ರಿ ಜಯಂತಿ

ದಾವಣಗೆರೆ, ಅ. 11- ಮಾಗನೂರು ಬಸಪ್ಪ ಪದವಿ ಪೂರ್ವ ಕಾಲೇಜಿನಲ್ಲಿ  ಭಾರತ ದೇಶದ ಮಹಾನ್ ಚೇತನಗಳಾದ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಜಿರವರ ಜಯಂತಿಯನ್ನು ಆಚರಿಸಲಾಯಿತು.  

ಪ್ರಾಚಾರ್ಯ ಡಾ. ಪ್ರಸಾದ್ ಬಂಗೇರ ಎಸ್ ವೇದಿಕೆಯ ಮೇಲೆ ಉಪಸ್ಥಿತರಿದ್ದರು. ರಸಾಯನ ಶಾಸ್ತ್ರ ವಿಭಾಗದ ಉಪನ್ಯಾಸಕರಾದ ಕು.ಹರ್ಷಿತ ಕೆ ಇವರು ಕಾರ್ಯಕ್ರಮದ ಕುರಿತು ಮಾತನಾಡಿದರು. 

ಮಹಾನ್ ವ್ಯಕ್ತಿಗಳ ಜೀವನ ಮತ್ತು ಆದರ್ಶಗಳನ್ನು ನಾವೆಲ್ಲರೂ ಪಾಲಿಸಿದಾಗಲೇ ಇಂತಹ ಆಚರಣೆಗಳು ಅರ್ಥಪೂರ್ಣ ಎಂದು  ಕೆ. ಹರ್ಷಿತ ತಿಳಿಸಿದರು. ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ರಘುಪತಿ ರಾಘವ ರಾಜಾರಾಮ್ ಪ್ರಾರ್ಥನೆ ಗೀತೆಯನ್ನು ಹಾಡಿದರು.  ಜೀವಶಾಸ್ತ್ರ ಉಪನ್ಯಾಸಕರಾದ ಶ್ರೀಮತಿ ಪಿ. ಮಮತ ಕಾರ್ಯಕ್ರಮ ನಡೆಸಿಕೊಟ್ಟರು.

error: Content is protected !!