ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ರೈತ ಸಂಘದ ಪ್ರತಿಭಟನೆ

ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ರೈತ ಸಂಘದ ಪ್ರತಿಭಟನೆ

ಜಗಳೂರು, ಅ.12- ಸಮರ್ಪಕ ನಿರಂತರ ವಿದ್ಯುತ್ ಪೂರೈಕೆಗಾಗಿ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತರು ಪ್ರತಿಭಟನೆ‌ ನಡೆಸಿದರು.

ಸಂಘಟನೆ ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ್ ಮಾತನಾಡಿ, ತಾಲ್ಲೂಕಿನಲ್ಲಿ ಬರ ಆವರಿಸಿದ್ದು, ರೈತರು ಬೋರ್
ವೆಲ್‌ಗಳನ್ನೇ ಅವಲಂಬಿಸಿದ್ದು, ಪ್ರತಿದಿನ 7 ಗಂಟೆಗಳ ಕಾಲ ಸಮರ್ಪಕ ವಿದ್ಯುತ್ ಪೂರೈಸಲು ಸರ್ಕಾರದ ಆದೇಶವಿದ್ದರೂ ಸಹ ಕೇವಲ 4 ಗಂಟೆಗಳ ಕಾಲ ಮಾತ್ರ ವಿದ್ಯುತ್ ಸರಬರಾಜು ಮಾಡುತ್ತಿದ್ದಾರೆ‌. 

ಕಳೆದ 15 ದಿನಗಳಿಂದ ದಿನಕ್ಕೆ  ಕೇವಲ 2 ಗಂಟೆಗಳ ಕಾಲ‌ ಮಾತ್ರ ವಿದ್ಯುತ್ ಸರಬರಾಜು ಮಾಡಲಾಗುತ್ತಿರುವುದು, ರೈತರ ಸಂಕಷ್ಟದ ಗಾಯದ ಮೇಲೆ‌ ಬರೆ ಎಳೆದಂತಾಗಿದೆ ಎಂದರು.

ಬಿತ್ತಿದ ಬೆಳೆಗಳು ವರುಣನ ಅವಕೃಪೆಯಿಂದ ಸಂಪೂರ್ಣ ಒಣಗಿವೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ರೈತರೊಂದಿಗೆ ವಿದ್ಯುತ್ ಕಣ್ಣಾಮುಚ್ಚಾಲೆ ಆಡುತ್ತಿರುವುದು ಸರಿಯಲ್ಲ. ಕೂಡಲೇ ದಿನಕ್ಕೆ 7ತಾಸು ನಿರಂತರ ವಿದ್ಯುತ್ ಸರಬರಾಜು ಮಾಡಬೇಕು ಎಂದು ಆಗ್ರಹಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಬೆಸ್ಕಾಂ‌ ಎಇಇ ಸುಧಾಮಣಿ, ಕೂಡಲೇ ಮನವಿ ಪತ್ರವನ್ನು ಜಿಲ್ಲಾಡಳಿತಕ್ಕೆ ರವಾನಿಸಿ ಮೇಲಾಧಿಕಾರಿಗಳ ಸಲಹೆಯಂತೆ ರೈತರ ಸಮಸ್ಯೆ ಬಗೆಹರಿಸಲಾಗುವುದು ಎಂದರು.

ಪಟ್ಟಣದ ಅಂಬೇಡ್ಕರ್ ಭವನದಿಂದ ಪ್ರಮುಖ ಬೀದಿಗಳಲ್ಲಿ ರೈತರು ಮಾನವ ಸರಪಳಿಯೊಂದಿಗೆ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಮಹಾತ್ಮ ಗಾಂಧಿ ವೃತ್ತದ ಮೂಲಕ ನೂತನ ಬೆಸ್ಕಾಂ ಇಲಾಖೆಗೆ ಮುತ್ತಿಗೆ ಹಾಕಿದರು.

ಸಂದರ್ಭದಲ್ಲಿ ಸಂಘಟನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಿರಂಜೀವಿ ಸಿ.ಎಂ.ಹೊಳೆ, ಪದಾಧಿಕಾರಿಗಳಾದ ಸತೀಶ್, ರಾಜು, ವೀರೇಶ್, ಸಹದೇವರೆಡ್ಡಿ, ಶರಣಪ್ಪ, ಪ್ರಹ್ಲಾದಪ್ಪ, ಕೆಂಚಪ್ಪ, ತಿಪ್ಪೇಸ್ವಾಮಿ, ಪರಸಪ್ಪ, ಪಾಪಣ್ಣ, ನಾಗರಾಜ್, ಹೊನ್ನೂರ್ ಅಲಿ, ಬಸಣ್ಣ, ಮಲ್ಲೇಶ್ ಮುಂತಾದವರು  ಭಾಗವಹಿಸಿದ್ದರು.

error: Content is protected !!