ನೀವು ಇಟ್ಟುಕೊಂಡಿರುವ ನಿರೀಕ್ಷೆ ಹುಸಿಯಾಗಲ್ಲ

ನೀವು ಇಟ್ಟುಕೊಂಡಿರುವ ನಿರೀಕ್ಷೆ ಹುಸಿಯಾಗಲ್ಲ

ಗೋಪನಾಳು ಕಾರ್ಯಕ್ರಮದಲ್ಲಿ ಶಾಸಕ ಕೆ.ಎಸ್.ಬಸವಂತಪ್ಪ ಭರವಸೆ

ದಾವಣಗೆರೆ, ಅ. 16- ನೀವು ಇಟ್ಟುಕೊಂಡಿರುವ ನಿರೀಕ್ಷೆಗೆ ಹುಸಿಯಾಗದಂತೆ ನಿಮ್ಮ ಕಷ್ಟ, ಸುಖಗಳಲ್ಲಿ ಭಾಗಿಯಾಗುವ ಮೂಲಕ ಸ್ಪಂದಿಸುವ ಕೆಲಸ ಮಾಡುತ್ತೇನೆ ಎಂದು ಶಾಸಕ ಕೆ.ಎಸ್. ಬಸವಂತಪ್ಪ ಭರವಸೆ ನೀಡಿದರು.

ಮಾಯಕೊಂಡ ಕ್ಷೇತ್ರ ವ್ಯಾಪ್ತಿಯ ಗೋಪನಾಳು ಗ್ರಾಮದಲ್ಲಿ ಶನಿವಾರ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಚುನಾವಣೆ ಪೂರ್ವದಲ್ಲಿ ಗೋಪನಾಳು ಗ್ರಾಮದಲ್ಲಿ ಬಸವಂತಪ್ಪ ಮತ ತೆಗೆದುಕೊಳ್ಳುವುದು ಬಹಳ ಕಷ್ಟ ಎಂದು ಮಾತನಾಡಿಕೊಳ್ಳುತ್ತಿದ್ದರು. ಆದರೆ ಈ ಗ್ರಾಮದ ಮತ ಬಂಧುಗಳು ಕ್ಷೇತ್ರದಲ್ಲೇ ಅತೀ ಹೆಚ್ಚು ಮತ ನೀಡಿ ನನ್ನನ್ನು ಇವತ್ತು ವಿಧಾನಸೌಧಕ್ಕೆ ಆಯ್ಕೆ ಮಾಡಿ ಕಳುಹಿಸಿದ್ದೀರಿ. ನಿಮ್ಮ ಋಣ ತೀರಿಸಲು ಸದಾ ಬದ್ಧನಾಗಿರುತ್ತೇನೆ ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾದ ರೂಪ ನಾಗರಾಜ್, ಉಪಾಧ್ಯಕ್ಷ ಶೇಖರಪ್ಪ, ಮುಖಂಡರಾದ ನೂರಲ್ಲಾ ಖಾನ್, ಲಿಂಗರಾಜ್, ಪ್ರವೀಣ್, ಅಂಜಿನಪ್ಪ, ಹನುಮಂತಪ್ಪ, ರಾಮಪ್ಪ, ಶರಣಪ್ಪ, ಹಜರತ್ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.

ಇದೇ ಸಂದರ್ಭದಲ್ಲಿ ಗೋಪನಾಳು ಗ್ರಾಮದಲ್ಲಿ ಸಂಚರಿಸಿ ಗ್ರಾಮಸ್ಥರ ಅಹವಾಲು ಆಲಿಸಿದರು. ಬಳಿಕ ಸರ್ಕಾರಿ ಶಾಲೆ ಮತ್ತು ಕಾಲೇಜಿಗೆ ಭೇಟಿ ನೀಡಿದ ಅವರು, ವಿದ್ಯಾರ್ಥಿಗಳ ಸಮಸ್ಯೆ, ಶಾಲೆಯ ಕೊಠಡಿ ಸಮಸ್ಯೆ, ಗುಣಮಟ್ಟದ ಶಿಕ್ಷಣ ಸೇರಿದಂತೆ ವಿವಿಧ ರೀತಿಯ ಸಮಸ್ಯೆಗಳ ಕುರಿತು ಪರಿಶೀಲನೆ ನಡೆಸಿದರು.

error: Content is protected !!