ವಿದ್ಯಾನಗರದಲ್ಲಿ ಇಂದು `ಶಿವ ಸಂಕಲ್ಪ’ ಭವನ ಉದ್ಘಾಟನೆ

ವಿದ್ಯಾನಗರದಲ್ಲಿ ಇಂದು `ಶಿವ ಸಂಕಲ್ಪ’ ಭವನ ಉದ್ಘಾಟನೆ

ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ದಾವಣಗೆರೆಯ ವಿದ್ಯಾನಗರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ  `ಶಿವ ಸಂಕಲ್ಪ’ ಭವನದ ಉದ್ಘಾಟನಾ ಸಮಾರಂಭವು ಇಂದು ಬೆಳಿಗ್ಗೆ 10.30ಕ್ಕೆ ನಡೆಯಲಿದೆ. 

ಪರಮಾತ್ಮನ ಸಂದೇಶ ಇನ್ನೂ ಹೆಚ್ಚಿನ ಜನರಿಗೆ ತಲುಪು ವಂತಾಗಲು ಅನುಕೂಲವಾಗಲಿ ಎಂಬ ಸಂಕಲ್ಪ ಮಾಡಿದ ಈಶ್ವರೀಯ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಲ್ಲೊಬ್ಬರಾದ ದಾವಣಗೆರೆ – ಶಾಮನೂರಿನ ಶ್ರೀಮತಿ ಲಕ್ಕಮ್ಮ ದ್ಯಾಮಪ್ಪ ಅವರು ವಿದ್ಯಾನಗರದ ನೂತನ – ದವನ್ ಕಾಲೇಜು ಹಿಂಭಾಗದಲ್ಲಿ ತಮ್ಮ 55×58 ಅಳತೆಯ ನಿವೇಶನವನ್ನು   ಬ್ರಹ್ಮಾಕುಮಾರಿ ಸಂಸ್ಥೆಗೆ ದಾನ ಮಾಡಿದ್ದರು. ಆ ನಿವೇಶನದಲ್ಲೀಗ ಈಶ್ವರೀಯ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ದಾನಿಗಳ ಸಹಕಾರದಿಂದ ಸುಮಾರು 2 ಕೋಟಿ ರೂ.ಗಳ ವೆಚ್ಚದಲ್ಲಿ `ಶಿವ ಸಂಕಲ್ಪ’ ಭವನ ನಿರ್ಮಾಣಗೊಂಡಿದೆ. 

ಈಶ್ವರೀಯ ವಿಶ್ವವಿದ್ಯಾಲಯದ ಹುಬ್ಬಳ್ಳಿ ವಲಯ ನಿರ್ದೇಶಕರಾದ ರಾಜಯೋಗಿ ಬ್ರಹ್ಮಾಕುಮಾರ ಡಾ. ಬಸವರಾಜ ರಾಜಋುಷಿ ಸಾನ್ನಿಧ್ಯ ವಹಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಶಾಮನೂರು  ಮಲ್ಲಿಕಾರ್ಜುನ್ ಅವರು ಜ್ಯೋತಿ ಬೆಳಗಿಸುವರು. ಬ್ರಹ್ಮಾಕುಮಾರೀಸ್ ಸಂಸ್ಥೆಯ ಹುಬ್ಬಳ್ಳಿ ವಲಯ ಸಂಚಾಲಕರಾದ ರಾಜಯೋಗಿನಿ ಬ್ರಹ್ಮಾಕುಮಾರಿ ನಿರ್ಮಲಾಜಿ ಅಧ್ಯಕ್ಷತೆ ವಹಿಸಲಿದ್ದಾರೆ. 

ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್ ಬಿ. ಹಿಟ್ನಾಳ್, ಬಾಪೂಜಿ ವಿದ್ಯಾಸಂಸ್ಥೆ ಆಡಳಿತ ಮಂಡಳಿ ಸದಸ್ಯರಾದ ಡಾ. ಪ್ರಭಾ ಮಲ್ಲಿಕಾರ್ಜುನ್, ಜವಳಿ ಉದ್ಯಮಿ ಬಿ.ಸಿ. ಉಮಾಪತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಮತಿ ಉಮಾ ಪ್ರಶಾಂತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಷಣ್ಮುಖಪ್ಪ, ಮಹಾನಗರ ಪಾಲಿಕೆ ಆಯುಕ್ತರಾದ ಶ್ರೀಮತಿ ರೇಣುಕಾ, ಈಶ್ವರೀಯ ವಿಶ್ವವಿದ್ಯಾಲಯದ ಹಾವೇರಿ ಶಾಖೆ ಸಂಚಾಲಕರಾದ ರಾಜಯೋಗಿನಿ ಬ್ರಹ್ಮಾಕುಮಾರಿ ಲೀಲಾಜಿ ಗೌರವಾನ್ವಿತ ಆಹ್ವಾನಿತರಾಗಿ ಪಾಲ್ಗೊಳ್ಳುವರು.

ಈಶ್ವರೀಯ ವಿಶ್ವವಿದ್ಯಾಲಯದ ಶಿರಸಿ ಸಂಚಾಲಕರಾದ ರಾಜಯೋಗಿನಿ ಬ್ರಹ್ಮಾಕುಮಾರಿ ವೀಣಾಜೀ ಮತ್ತು ದಾವಣಗೆರೆ ಶಾಖೆ ಸಂಚಾಲಕರಾದ ರಾಜಯೋಗಿನಿ ಬ್ರಹ್ಮಾಕುಮಾರಿ ಲೀಲಾಜಿ ಕಾರ್ಯಕ್ರಮದ ಉಸ್ತುವಾರಿ ವಹಿಸಿದ್ದಾರೆ.

ಈಶ್ವರೀಯ ವಿಶ್ವವಿದ್ಯಾಲಯದ ವಿದ್ಯಾನಗರ ಶಾಖೆಯ ಸಂಚಾಲಕರಾದ ರಾಜಯೋಗಿನಿ ಬ್ರಹ್ಮಾಕುಮಾರಿ ಗೀತಾಜೀ ಈ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ.

error: Content is protected !!