ಎಲೆಬೇತೂರಿನಲ್ಲಿ ವಾಲ್ಮೀಕಿ ಜಯಂತಿ

ಎಲೆಬೇತೂರಿನಲ್ಲಿ ವಾಲ್ಮೀಕಿ ಜಯಂತಿ

ದಾವಣಗೆರೆ, ಅ. 30- ಇಲ್ಲಿಗೆ ಸಮೀಪದ ಎಲೆಬೇತೂರು ಗ್ರಾಮದ ಶ್ರೀ ಕೊಂಡಜ್ಜಿ ಬಸಪ್ಪ ಪ್ರೌಢಶಾಲೆ ಹಾಗೂ ಶ್ರೀ ತರಳಬಾಳು ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆದಿಕವಿ ರಾಮಾಯಣ ಕಾವ್ಯದ ಕರ್ತೃ ಮಹರ್ಷಿ ವಾಲ್ಮೀಕಿ ದಿನಾಚರಣೆ ಆಚರಿಸಲಾಯಿತು. ಶ್ರೀ ಕೊಂಡಜ್ಜಿ ಬಸಪ್ಪ ಪ್ರೌಢಶಾಲೆಯ ಕನ್ನಡ ಶಿಕ್ಷಕ ನಾಗರಾಜ್  ಅವರು ವಾಲ್ಮೀಕಿ ಮಹರ್ಷಿಗಳ ಜೀವನ ಚರಿತ್ರೆ ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ತರಳಬಾಳು ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ಹೆಚ್. ಬಸವರಾಜಪ್ಪ, ತಾಲ್ಲೂಕು ಕಸಾಪ ನಿರ್ದೇಶಕ ಹಾಗೂ ಸ್ಥಳೀಯ ಸಲಹಾ ಸಮಿತಿ ಸದಸ್ಯ ಎಂ. ಷಡಾಕ್ಷರಪ್ಪ, ಮುಖ್ಯೋಪಾಧ್ಯಾಯರಾದ ಎಂ.ಬಿ. ಪ್ರೇಮ, ತರಳಬಾಳು ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಬಿ.ಎಂ. ಶಶಿಕಲಾ ಮತ್ತಿತರರು ಉಪಸ್ಥಿತರಿದ್ದರು.

error: Content is protected !!