ಬ್ಯಾಂಕುಗಳಲ್ಲಿ ನೇಮಕಾತಿ ಆಗಬೇಕು, ಹೊರಗುತ್ತಿಗೆ ನಿಲ್ಲಬೇಕು

ಬ್ಯಾಂಕುಗಳಲ್ಲಿ ನೇಮಕಾತಿ ಆಗಬೇಕು, ಹೊರಗುತ್ತಿಗೆ ನಿಲ್ಲಬೇಕು

ಬ್ಯಾಂಕ್ ನೌಕರರ ಸಭೆಯಲ್ಲಿ ಕರ್ನಾಟಕ ಪ್ರದೇಶ ಬ್ಯಾಂಕ್ ಎಂಪ್ಲಾಯೀಸ್ ಫೆಡರೇಷನ್‌ನ ಜಂಟಿ ಕಾರ್ಯದರ್ಶಿ ಕಾಂ. ಸ್ಟೀಫನ್ ಜಯಚಂದ್ರ

ದಾವಣಗೆರೆ, ನ. 1 – ಸಾರ್ವಜನಿಕ ಬ್ಯಾಂಕಿಂಗ್ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿ ನಲ್ಲಿ ಬ್ಯಾಂಕುಗಳಲ್ಲಿ ಅಗತ್ಯ ಪ್ರಮಾಣದ ನೇಮ ಕಾತಿ ಆಗಬೇಕು ಮತ್ತು ಬ್ಯಾಂಕ್ ಕೆಲಸ ಗಳನ್ನು ಹೊರಗುತ್ತಿಗೆ ನೀಡುವುದನ್ನು ನಿಲ್ಲಿಸಬೇಕು ಎಂದು ಕರ್ನಾಟಕ ಪ್ರದೇಶ ಬ್ಯಾಂಕ್ ಎಂಪ್ಲಾ ಯೀಸ್ ಫೆಡರೇಷನ್‌ನ ಜಂಟಿ ಕಾರ್ಯದರ್ಶಿ ಕಾಂ. ಸ್ಟೀಫನ್ ಜಯಚಂದ್ರ  ಹೇಳಿದರು. 

ಕರ್ನಾಟಕ ಪ್ರದೇಶ ಬ್ಯಾಂಕ್ ಎಂಪ್ಲಾಯೀಸ್ ಫೆಡರೇಷನ್ ಮತ್ತು ಜಿಲ್ಲಾ ಬ್ಯಾಂಕ್ ನೌಕರರ ಸಂಘದ ವತಿಯಿಂದ ಕುವೆಂಪು ಕನ್ನಡ ಭವನದಲ್ಲಿ ಇಂದು ಆಯೋಜಿಸಿದ್ದ ಜಿಲ್ಲಾ ಮಟ್ಟದ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. 

ಬ್ಯಾಂಕಿಂಗ್ ಸೌಲಭ್ಯವು ಈ ದೇಶದ ಮೂಲೆ ಮೂಲೆಗೂ ತಲುಪಬೇಕು ಮತ್ತು ಗ್ರಾಹಕರಿಗೆ ಅತ್ತುಕೃಷ್ಟ ಸೇವೆಯೂ ಸಿಗಬೇಕೆನ್ನು ವುದು ನಮ್ಮ ಬೇಡಿಕೆಯಾಗಿದೆ. ಈ ಬೇಡಿಕೆಗಳ ಈಡೇರಿಕೆಗಾಗಿ ಅಖಿಲ ಭಾರತ ಬ್ಯಾಂಕ್ ನೌಕರರ ಸಂಘವು ಹೋರಾಟಕ್ಕೆ ಸಿದ್ಧವಾಗಿದೆ ಎಂದು ಸ್ಟೀಫನ್ ಜಯಚಂದ್ರ ಹೇಳಿದರು.

ಕರ್ನಾಟಕ ಪ್ರದೇಶ ಬ್ಯಾಂಕ್ ಎಂಪ್ಲಾಯೀಸ್ ಫೆಡರೇಷನ್‌ನ ಜಂಟಿ ಕಾರ್ಯದರ್ಶಿ ಹಾಗೂ  ಜಿಲ್ಲಾ ಬ್ಯಾಂಕ್ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ರಾಘವೇಂದ್ರ ನಾಯರಿ ಮಾತನಾಡಿ, ಬ್ಯಾಂಕುಗಳಲ್ಲಿ ಖಾಲಿ ಇರುವ 2 ಲಕ್ಷ ಹುದ್ದೆಗಳಿಗೆ ನೇಮಕಾತಿ ಮಾಡಲು ಒತ್ತಾಯಿಸಿ, ಹಳೆಯ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿ ಸಲು ಒತ್ತಾಯಿಸಿ ಮತ್ತು ಹೊರಗುತ್ತಿಗೆ ಪದ್ಧತಿ ಯನ್ನು ವಿರೋಧಿಸಿ ಅಖಿಲ ಭಾರತ ಬ್ಯಾಂಕ್ ನೌಕರರ ಸಂಘವು ಇತಿಹಾಸದಲ್ಲೇ ಪ್ರಪ್ರಥಮ ವಾಗಿ 4 ತಿಂಗಳುಗಳ ಕಾಲ ಸುದೀರ್ಘವಾದ ಹೋರಾಟದ ಕಾರ್ಯಕ್ರಮಗಳಿಗೆ ಚಾಲನೆ ನೀಡಿದೆ. ಬ್ಯಾಡ್ಜ್ ಧರಿಸುವುದು, ಟ್ವಿಟರ್ ಅಭಿ ಯಾನ, ಜಿಲ್ಲಾವಾರು ಸದಸ್ಯರ ಸಭೆ, ಸರ್ಕಾರಕ್ಕೆ ಮನವಿ ಸಲ್ಲಿಸುವುದು, ಬ್ಯಾಂಕ್‌ವಾರು ಮುಷ್ಕರ, ರಾಜ್ಯವಾರು ಮುಷ್ಕರ, ಅಖಿಲ ಭಾರತ ಬ್ಯಾಂಕ್ ಮುಷ್ಕರ ಮೊದಲಾದ ಹೋರಾಟವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಎಐಟಿಯುಸಿ ರಾಜ್ಯ ಉಪಾಧ್ಯಕ್ಷ ಹೆಚ್.ಜಿ.ಉಮೇಶ್ ಅವರಗೆರೆ ಮಾತನಾಡಿ, ಬ್ಯಾಂಕ್ ರಾಷ್ಟ್ರೀಕರಣಕ್ಕಾಗಿ ಹೋರಾಟ ಮಾಡಿದ್ದ ಅಖಿಲ ಭಾರತ ಬ್ಯಾಂಕ್ ನೌಕರರ ಸಂಘವು ಇಂದು ಬ್ಯಾಂಕುಗಳ ಉಳಿವಿಗಾಗಿ ಹೋರಾಟ ಮಾಡಬೇಕಾದ ಪರಿಸ್ಥಿತಿ ಬಂದಿರುವುದು ಸರ್ಕಾರದ ರಾಷ್ಟ್ರೀಕರಣ  ವಿರೋಧಿ ಧೋರಣೆಯನ್ನು ಪ್ರತಿಬಿಂಬಿಸುತ್ತದೆ ಎಂದರು.

ಸಭೆಯ ಅಧ್ಯಕ್ಷತೆಯನ್ನು ಬ್ಯಾಂಕ್ ಕಾರ್ಮಿಕ ಮುಖಂಡ ಕಾಂ‌.ಆರ್.ಆಂಜನೇಯ ವಹಿಸಿದ್ದರು. ಸಭೆಯಲ್ಲಿ ಬ್ಯಾಂಕ್ ಕಾರ್ಮಿಕ ಮುಖಂಡರಾದ ಮೋಹನ್ ಹೊಂಬಾಳೆ, ಹೆಚ್.ಎಸ್.ತಿಪ್ಪೇಸ್ವಾಮಿ, ಕೆ.ವಿಶ್ವನಾಥ ಬಿಲ್ಲವ, ಎಂ.ಎಂ.ಸಿದ್ದಲಿಂಗಯ್ಯ, ಕೆ.ರವಿಶಂಕರ್, ಪರಶುರಾಮ್, ಕೆ.ಶಶಿಶೇಖರ್, ಅಜಯ್ ಕುಮಾರ್, ಶ್ರೀನಿವಾಸ ನಾಡಿಗ್, ಅಣ್ಣಪ್ಪ, ನಂದಾ, ಸತೀಶ್, ಪ್ರಶಾಂತ್, ಜಗಳೂರು ತಿಪ್ಪೇಸ್ವಾಮಿ, ಡಿ.ಎ.ಸಾಕಮ್ಮ, ಅಮೃತ, ಜಯಲಕ್ಷ್ಮಿ, ಉಷಾ, ಸಂದೀಪ್, ಮನು ಭಾರದ್ವಾಜ್ ಹಾಗೂ ಬ್ಯಾಂಕ್ ನಿವೃತ್ತ ನೌಕರರ ಸಂಘದ ಅಜಿತ್‌ಕುಮಾರ್ ನ್ಯಾಮತಿ, ಜಿ.ಬಿ.ಶಿವಕುಮಾರ್, ಹೆಚ್.ಸುಗೀರಪ್ಪ, ಗುಡ್ಡಪ್ಪ ಮುಂತಾದವರು ಭಾಗವಹಿಸಿದ್ದರು.

error: Content is protected !!