ಹಾಲಿವಾಣಿದಲ್ಲಿ ಸಂಭ್ರಮದ ರಾಜ್ಯೋತ್ಸವ

ಹಾಲಿವಾಣಿದಲ್ಲಿ ಸಂಭ್ರಮದ ರಾಜ್ಯೋತ್ಸವ

ಮಲೇಬೆನ್ನೂರು, ನ.3- ಹಾಲಿವಾಣದಲ್ಲಿ ಸ್ವಾಮಿ ವಿವೇಕಾನಂದ ಆಟೋ ಮಾಲೀಕರು ಮತ್ತು ಚಾಲಕರ ಸಂಘದ ವತಿಯಿಂದ ಪ್ರಥಮ ಬಾರಿಗೆ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಿದ ಆಟೋ ಮಾಲೀಕರು ಹಾಗೂ ಚಾಲಕರು ನಂತರ ಎಲ್ಲರಿಗೂ ಸಿಹಿ ವಿತರಿಸಿದರು. ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಲಕ್ಷ್ಮಿದೇವಿ ಮಂಜುನಾಥ್, ಉಪಾಧ್ಯಕ್ಷೆ ಶ್ರೀಮತಿ ಕಮಲಬಾಯಿ ಪರಮೇಶ್ವರನಾಯ್ಕ, ತಾ.ಪಂ. ಮಾಜಿ ಅಧ್ಯಕ್ಷ ಎಸ್.ಜಿ.ಪರಮೇಶ್ವರಪ್ಪ, ಪಿಡಿಓ ಶ್ರೀನಿವಾಸ್ ಭಾಗವಹಿಸಿದ್ದರು.

error: Content is protected !!