ಜಿಲ್ಲಾ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವ

ಜಿಲ್ಲಾ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವ

ದಾವಣಗೆರೆ, ನ. 3 – ದಾವಣಗೆರೆ ಇಲೆವೆನ್ಸ್ ಹಾಗೂ ಜಿಲ್ಲಾ ಕ್ರೀಡಾಪಟುಗಳ ಸಾಂಸ್ಕೃತಿಕ ಸಂಘದ ವತಿಯಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಬೆಳಿಗ್ಗೆ  ಧ್ವಜಾರೋಹಣ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಕ್ರೀಡಾಪಟುಗಳ ಸಂಘದ ದಿನೇಶ್ ಕೆ.ಶೆಟ್ಟಿ, ಶಿವಗಂಗಾ ಶ್ರೀನಿವಾಸ್, ರಾಜುರೆಡ್ಡಿ, ಕೆ.ಜಿ.ಶಿವಕುಮಾರ್, ಹೆಚ್.ಮಹಾದೇವ್, ಮಾಲತೇಶ್ ಎಂ.ಆರ್., ರಂಗನಾಥ್, ಕುರುಡಿ ಗಿರೀಶ್, ಜಯಪ್ರಕಾಶ್ ಗೌಡ ಉಪಸ್ಥಿತರಿದ್ದರು. ಸಂಜೆ ಭದ್ರಾವತಿ ಬ್ರದರ್‌ ಅವರಿಂದ ರಸಮಂಜರಿ ಕಾರ್ಯಕ್ರಮ ನಡೆಯಿತು.

error: Content is protected !!