ದಾವಣಗೆರೆ, ನ.7- ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವದ ಪೂರ್ವಭಾವಿ ಸಭೆಯಲ್ಲಿ ಆಂಗ್ಲ ನಾಮ ಫಲಕಗಳಿಗೆ ಕಡಿವಾಣ ಹಾಕುವಂತೆ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಎಂ.ಎಸ್. ರಾಮೇಗೌಡ ಒತ್ತಾಯಿಸಿದರು.
ಮಾಲ್ಗಳಲ್ಲಿ, ಐಷರಾಮಿ ಹೋಟೆಲ್ಗಳಲ್ಲಿ ಕನ್ನಡಕ್ಕೆ ಆದ್ಯತೆ ನೀಡಬೇಕು. ಕನ್ನಡಿಗರಿಗೆ ಉದ್ಯೋಗ ನೀಡಬೇಕು ಎಂದು ಒತ್ತಾಯಿಸಿದರು.
ಸಭೆಯ ನಂತರ ಪಾಲಿಕೆಯಲ್ಲಿ ಆಂಗ್ಲ ನಾಮ ಫಲಕಗಳು ಎದ್ದು ಕಾಣುತ್ತಿತ್ತು ಅಂತ ನಾಮಫಲಕಗಳನ್ನು ಹರಿದು ಹಾಕುವ ಮೂಲಕ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಗಿರೀಶ್ ಕುಮಾರ್, ಉತ್ತರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಲೋಕೇಶ್, ಯುವ ಘಟಕದ ಅಧ್ಯಕ್ಷ ಗೋಪಾಲ್ ದೇವರಮನಿ, ನಗರ ಉಪಾಧ್ಯಕ್ಷ ಜಿ.ಎಸ್. ಸಂತೋಷ್, ದಾದಾಪೀರ್, ಸಾಕಮ್ಮ, ಮತ್ತಿತರರು ಉಪಸ್ಥಿತರಿದ್ದರು.