ಲಯನ್ಸ್ ಆಂಗ್ಲ ಮಾಧ್ಯಮ ಶಾಲೆಯಯಲ್ಲಿ ಕನ್ನಡ ರಾಜ್ಯೋತ್ಸವ

ಲಯನ್ಸ್ ಆಂಗ್ಲ ಮಾಧ್ಯಮ ಶಾಲೆಯಯಲ್ಲಿ ಕನ್ನಡ ರಾಜ್ಯೋತ್ಸವ

ದಾವಣಗೆರೆ, ನ. 8 – ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಲಯನ್ಸ್  ಕ್ಲಬ್ ಹಾಗೂ ಲಯನ್ಸ್ ಆಂಗ್ಲ ಮಾಧ್ಯಮ  ಶಾಲೆಯ ಸಹಯೋಗದೊಂದಿಗೆ  ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಹಿರಿಯ ಪತ್ರಕರ್ತರು ಹಾಗೂ ಕನ್ನಡ ಹೋರಾಟಗಾರರಾದ ಐರಣಿ ಬಸವರಾಜ್ ಅವರು ಧ್ವಜಾರೋಹಣ ನೆರವೇರಿಸಿದರು.  

ಅಧ್ಯಕ್ಷತೆಯನ್ನು ಕ್ಲಬ್‌ನ ಅಧ್ಯಕ್ಷ  ನೀಲಿ ಉಮೇಶ್ ವಹಿಸಿದ್ದರು. ಲಯನ್ಸ್  ಸ್ಕೂಲ್ ಚೇರ್ಮನ್  ಆರ್. ಜಿ. ಶ್ರೀನಿವಾಸ್ ಮೂರ್ತಿ ಹಾಗೂ ಇತರರು ಉಪಸ್ಥಿತರಿದ್ದರು.

error: Content is protected !!