ಹರಿಹರ : ದರ್ಗಾ ಮುಂಭಾಗದ ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ

ಹರಿಹರ : ದರ್ಗಾ ಮುಂಭಾಗದ ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ

ಹರಿಹರ, ನ.28- ನಗರದ ಜಯ ಕರ್ನಾಟಕ ಸಂಘಟನೆ ವತಿಯಿಂದ ದರ್ಗಾ ಮುಂಭಾಗದ ರಸ್ತೆಯನ್ನು ದುರಸ್ತಿಪಡಿಸುವಂತೆ ಆಗ್ರಹಿಸಿ, ಎರಡನೇ ದಿನದ ಧರಣಿ ಸತ್ಯಾಗ್ರಹ ನಡೆಸಲಾಯಿತು.

ಈ ವೇಳೆ ಮಾತನಾಡಿದ ಜಯಕರ್ನಾಟಕ ಸಂಘಟನೆಯ ಮುಖಂಡ ಗೋವಿಂದ ಮಾತನಾಡಿ, ಹರಿಹರ ನಗರದ ಕೆ.ಇ.ಬಿ. ಮುಂಭಾಗದ ಬೀರೂರು -ಸಮ್ಮಸಗಿ ರಾಜ್ಯ ಹೆದ್ದಾರಿ ತುಂಗಭದ್ರಾ ಹೊಸ ಸೇತುವೆ ಸಮೀಪದ ರಸ್ತೆಯು   ಹದಗೆಟ್ಟು ಹೋಗಿರುವುದರಿಂದ ಸಾರ್ವಜನಿಕರಿಗೆ ಮತ್ತು ವಾಹನ ಸವಾರರರಿಗೆ ಪ್ರತಿನಿತ್ಯ ಹಲವಾರು ರೀತಿಯ ತೊಂದರೆಯನ್ನು ಹಲವಾರು ವರ್ಷಗಳಿಂದ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಕಾಮಗಾರಿ ಆಗುವವರೆಗೂ ಧರಣಿ ಸತ್ಯಾಗ್ರಹ ಮುಂದುವರೆಯುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ತಾಲ್ಲೂಕು ಅಧ್ಯಕ್ಷ ಗೋವಿಂದ್, ಉಪಾಧ್ಯಕ್ಷ ಎಂ.ಆರ್. ಆನಂದ್, ಪ್ರಧಾನ ಕಾರ್ಯದರ್ಶಿ ಸಿ.ಎಚ್.ಸುನಿಲ್ ಕುಮಾರ್, ಪ್ರದೀಪ್, ಶಿವಶಕ್ತಿ ವಿದ್ಯಾರ್ಥಿ ಘಟಕದ ಅಧ್ಯಕ್ಷ ಎಚ್.ಪಿ.ಶ್ರೀನಿವಾಸ್, ಆಕಾಶ್, ಜೀವನ್, ಗಗನ್, ಪ್ರಜ್ವಲ್, ರವಿ, ಸಿದ್ದೇಶ್, ಸಂತೋಷ್, ಪರಶುರಾಮ್ ಮತ್ತಿತರರು ಉಪಸ್ಥಿತರಿದ್ದರು.

error: Content is protected !!