ದಾವಣಗೆರೆ, ನ. 28 – ವಿಧಾನಸೌಧದ ಮುಂಭಾಗದಲ್ಲಿ ಸರ್ಕಾರದ ವತಿ ಯಿಂದ ಸಂವಿಧಾನ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾಯಕೊಂಡದ ಶಾಸಕ ಕೆ.ಎಸ್. ಬಸವಂತಪ್ಪ ಭಾಗವಹಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹಾದೇವಪ್ಪ, ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್, ಕಮಿಷನರ್ ರಾಕೇಶ್ ಸೇರಿದಂತೆ ಅಧಿಕಾರಿಗಳು ಭಾಗವಹಿಸಿದ್ದರು.
ಸರ್ಕಾರದ ಸಂವಿಧಾನ ದಿನಾಚರಣೆಯಲ್ಲಿ ಶಾಸಕ ಬಸವಂತಪ್ಪ
![13 basavanthappa samvidhana 29.11.2023 ಸರ್ಕಾರದ ಸಂವಿಧಾನ ದಿನಾಚರಣೆಯಲ್ಲಿ ಶಾಸಕ ಬಸವಂತಪ್ಪ](https://janathavani.com/wp-content/uploads/2023/11/13-basavanthappa-samvidhana-29.11.2023-860x475.jpg)