ಸರ್ಕಾರಿ ಬಸ್ ಸೌಲಭ್ಯ ಕಲ್ಪಿಸಲು ಒತ್ತಾಯಿಸಿ ವಿದ್ಯಾರ್ಥಿಗಳ ಮನವಿ

ಸರ್ಕಾರಿ ಬಸ್ ಸೌಲಭ್ಯ ಕಲ್ಪಿಸಲು ಒತ್ತಾಯಿಸಿ ವಿದ್ಯಾರ್ಥಿಗಳ ಮನವಿ

ಜಗಳೂರು, ಡಿ. 15 – ತಾಲ್ಲೂಕಿನ  ಗೌಡಗೊಂಡನಹಳ್ಳಿ ಗ್ರಾಮದ ವಿದ್ಯಾರ್ಥಿಗಳು  ಸರ್ಕಾರಿ ಬಸ್ಸು ಸೌಲಭ್ಯ ಕಲ್ಪಿಸಲು ಒತ್ತಾಯಿಸಿ ಪಟ್ಟಣದ ತಾಲ್ಲೂಕು ಕಛೇರಿಗೆ ಆಗಮಿಸಿ  ಮನವಿ ಪತ್ರ ಸಲ್ಲಿಸಿದರು.

ಕರುನಾಡ ನವ ನಿರ್ಮಾಣ ವೇದಿಕೆ ರಾಜ್ಯಾಧ್ಯಕ್ಷ ಜೆ. ಮಹಾಲಿಂಗಪ್ಪ ಮಾತನಾಡಿ, ಸ್ವಾತಂತ್ರ್ಯ ಬಂದು 75 ವರ್ಷಗಳು ಸಂದಿದರು ಇಂದೂ ಸಹ ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಸುಮಾರು ಮೂರು, ನಾಲ್ಕೂ ಕಿಲೋ ಮೀಟರ್ ನಡೆದುಕೊಂಡು ಬಂದು ವಿದ್ಯಾಭ್ಯಾಸ ಮಾಡುವ ಶೋಚನಿಯ ಸ್ಥಿತಿ ನಿರ್ಮಾಣವಾಗಿರುವುದು ದುರಂತ ಎಂದು ಆಕ್ರೋಶ ವ್ಯಕ್ತಪಡಿಸಿದರು.

 ಸಾವಿರಾರು ಜನ ವಿದ್ಯಾರ್ಥಿಗಳು ಪದವಿ ಪೂರ್ವ,ಪದವಿ, ವೃತ್ತಿಪರ ಶಿಕ್ಷಣ ಪಡೆಯಲು ಪ್ರತಿನಿತ್ಯ ಜಗಳೂರು ಪಟ್ಟಣಕ್ಕೆ ಆಗಮಿಸುತ್ತಿದ್ದು ಸರಿಯಾದ ಸಮಯಕ್ಕೆ ಸಾರಿಗೆ ವ್ಯವಸ್ಥೆ ಇಲ್ಲದೇ ವಿದ್ಯಾರ್ಥಿಗಳು ಶಿಕ್ಷಣದಿಂದ ವಿಮುಖರಾಗುತ್ತಿದ್ದಾರೆ. ಇನ್ನಾದರು ಕೆ.ಎಸ್.ಆರ್.ಟಿ.ಸಿ. ಅಧಿಕಾರಿಗಳು ಕೇವಲ ಜಗಳೂರು ದಾವಣಗೆರೆ ಮಾರ್ಗದಲ್ಲಿ ಬಸ್ಸುಗಳನ್ನು ಸಂಚಾರ ಮಾಡಿಸುವ ಜೊತೆಗೆ ಗ್ರಾಮೀಣ ಭಾಗಕ್ಕೆ ಸೇವೆಯನ್ನು ಒದಗಿಸಬೇಕೆಂದು ಒತ್ತಾಯ ಮಾಡಿದರು. ಗಾಣಗಟ್ಟೆ ಮಾರ್ಗದಲ್ಲಿ ಸಂಚಾರ ಮಾಡುವ ಸರ್ಕಾರಿ ಬಸ್ಸನ್ನು  ಗೌರಿಪುರ, ಕ್ಯಾಸೇನಹಳ್ಳಿ, ತುಂಬಿನಕಟ್ಟೆ, ಮರಿಕಟ್ಟೆ, ಗೌಡಗೊಂಡನಹಳ್ಳಿ ಮುಖಾಂತರ ಬಸ್ಸು ಸಂಚಾರ ಮಾಡಲು ವ್ಯವಸ್ಥೆ ಮಾಡಬೇಕೆಂದು ಅವರು ಒತ್ತಾಯ ಮಾಡಿದರು.

ಈ ಸಂದರ್ಭದಲ್ಲಿ ಜಯಂತೆ, ಪಾತಲಿಂಗಪ್ಪ, ಮಧು-ಅಜ್ಜಯ್ಯ.ಮಂಜುನಾಥ್, ಮನು, ಸಂಜನ, ಮೇಘನ, ಲತಾ, ಲಕ್ಷ್ಮಿ, ರಮ್ಯ, ರೇಖಾ, ಮೇಘನ, ಚಂದನ, ಮಧು ಮತ್ತಿತರು ಚೇತನ ಮುಂತಾದವರು ಇದ್ದರು.

error: Content is protected !!