ವಿಪಕ್ಷ ಸಂಸದರ ಅಮಾನತು ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ವಿಪಕ್ಷ ಸಂಸದರ ಅಮಾನತು ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ದಾವಣಗೆರೆ, ಡಿ. 22- ಸಂಸತ್ತಿನಲ್ಲಿ 140 ಕ್ಕೂ ಹೆೆಚ್ಚು ಸಂಸದರನ್ನು ಅಮಾನತ್ತು ಮಾಡಿರುವುದನ್ನು ಖಂಡಿಸಿ ನಗರದ ಜಯದೇವ ವೃತ್ತದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಇಂದು ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಹೆಚ್.ಬಿ. ಮಂಜಪ್ಪ ಮಾತನಾಡಿ, ಬಿಜೆಪಿ ಸರ್ಕಾರ ಪ್ರಜಾಪ್ರಭುತ್ವವನ್ನು ಕಗ್ಗೊಲೆ ಮಾಡುವಂತಹ ಕೆಲಸ ಮಾಡುತ್ತಿದೆ. ದೇಶದಲ್ಲಿ ಜನರ, ರೈತರ ಪರ ಕಾಳಜಿ ವಹಿಸಿದ ಸರ್ಕಾರ ಇದಾಗಿದೆ. ಸಂಸತ್ ರಕ್ಷಣೆ ಮಾಡದ ನೀವುಗಳು ದೇಶವನ್ನು ಹೇಗೆ ರಕ್ಷಣೆ ಮಾಡುತ್ತೀರಿ ಎಂದು ಪ್ರಶ್ನಿಸಿದರು. 

ಪ್ರತಿಭಟನೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ, ಕೆಪಿಸಿಸಿ ವಕ್ತಾರ ಡಿ. ಬಸವರಾಜ್, ಶಾಮನೂರು ಟಿ. ಬಸವರಾಜ್, ಎಸ್.ಮಲ್ಲಿಕಾರ್ಜುನ್, ಕೆ.ಜಿ .ಶಿವಕುಮಾರ್, ಅಬ್ದುಲ್ ಘನಿ ತಾಹೇರ್ ಮತ್ತಿತರರು  ಭಾಗವಹಿಸಿದ್ದರು.

error: Content is protected !!