ದಾವಣಗೆರೆ, ಜ. 7 – ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ವತಿಯಿಂದ ದಾವಣಗೆರೆ ನಗರದಲ್ಲಿ ನಡೆಯುತ್ತಿರುವ ರಾಜ್ಯಮಟ್ಟದ ಹೊನಲು ಬೆಳಕಿನ ಪುಟ್ಬಾಲ್ ಪಂದ್ಯಾವಳಿಯ ಎರಡನೇ ದಿನದ ಕಾರ್ಯಕ್ರಮಕ್ಕೆ ಮಹಾನಗರ ಪಾಲಿಕೆ ಸದಸ್ಯ ಕೆ. ಚಮನ್ ಸಾಬ್ ಅವರು ಚಾಲನೆ ನೀಡಿದರು.
ಚಿಕ್ಕಮಗಳೂರು ಮತ್ತು ಹಾವೇರಿ ತಂಡಗಳ ರೋಚಕ ಸೆಣಸಾಟದಲ್ಲಿ ಹಾವೇರಿ ತಂಡವು ಜಯಗಳಿಸಿತು. ಈ ಸಂದರ್ಭದಲ್ಲಿ ಜಿಲ್ಲಾ ಪುಟ್ಬಾಲ್ ಅಸೋಸಿಯೇಷನ್ ಅಧ್ಯಕ್ಷ ದಿನೇಶ್ ಕೆ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಅಲಾವಲ್ಲಿ ಮುಜಾಹಿದ್ ಖಾನ್, ಮಹಾನಗರ ಪಾಲಿಕೆ ಸದಸ್ಯ ಎ. ನಾಗರಾಜ್, ಸಬ್ ಇನ್ಸ್ಪೆಕ್ಟರ್ ಜ್ಯೋತಿರಾಜ್, ಮಹಮದ್ ರಫೀಕ್, ಚಂದ್ರಶೇಖರ, ಅಲ್ಲಾಭಕ್ಷಿ, ಖಲಿಖಾಜಿ, ಅಹ್ಮದ್ ಮುಜ್ತಾಬ್ ಸೇರಿದಂತೆ ಅಸೋಸಿಯೇಷನ್ ಪದಾಧಿಕಾರಿಗಳು ಭಾಗವಹಿಸಿದ್ದರು.