ವಸತಿ ಯೋಜನೆ ರೂಪಿಸಲು ಆಗ್ರಹ

ವಸತಿ ಯೋಜನೆ ರೂಪಿಸಲು ಆಗ್ರಹ

ಹರಿಹರ, ಜ. 8- ತಾಲ್ಲೂಕಿನ ಕಡ್ಲೆಗೊಂದಿ, ಭಾನುವಳ್ಳಿ ಗ್ರಾಮಗಳ ನಿರ್ವಸತಿಕರಿಗೆ ವಸತಿ ಯೋಜನೆ ರೂಪಿಸಲು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ) ವತಿಯಿಂದ ನಗರಕ್ಕೆ ಇಂದು ಆಗಮಿಸಿದ್ದ ಉಪವಿಭಾಗಾಧಿಕಾರಿ ಶ್ರೀಮತಿ ಎನ್. ದುರ್ಗಾಶ್ರೀ ಅವರಿಗೆ ಮನವಿ ಸಲ್ಲಿಸಲಾಯಿತು. 

ಸಮಿತಿ ತಾಲ್ಲೂಕು ಸಂಚಾಲಕ ಪಿ.ಜೆ. ಮಹಾಂತೇಶ್ ಸೇರಿದಂತೆ ಇತರೆ ಪದಾಧಿಕಾರಿಗಳು ಉಪಸ್ಥಿತರಿದ್ದರು. 

error: Content is protected !!