ಹರಿಹರದಲ್ಲಿ ಅಯ್ಯಪ್ಪ ಸ್ವಾಮಿ ದೀಪೋತ್ಸವ

ಹರಿಹರದಲ್ಲಿ ಅಯ್ಯಪ್ಪ ಸ್ವಾಮಿ ದೀಪೋತ್ಸವ

ಹರಿಹರ, ಜ, 7- ನಗರದಲ್ಲಿ ಅಯ್ಯಪ್ಪ ಸ್ವಾಮಿ ದೀಪೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.

ತುಂಗಭದ್ರಾ ನದಿಯ ದಡದಲ್ಲಿರುವ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಬೆಳಗ್ಗೆ ಅಯ್ಯಪ್ಪ ಸ್ವಾಮಿ, ವಿನಾಯಕ ಸ್ವಾಮಿ, ಸುಬ್ರಮಣ್ಯ ಸ್ವಾಮಿಗೆ ಅಭಿಷೇಕ, ಅಲಂಕಾರ, ಮಹಾ ಮಂಗಳಾರತಿ, ಸೇರಿದಂತೆ ವಿವಿಧ ಪೂಜಾ ಕಾರ್ಯಗಳು ನಡೆದವು.

ಸಂಜೆ ಶ್ರೀ ಹರಿಹರೇಶ್ವರ ದೇವಸ್ಥಾನ ಆವರಣದಿಂದ ಟ್ರ್ಯಾಕ್ಟರ್ ನಲ್ಲಿ ಅಯ್ಯಪ್ಪ ಸ್ವಾಮಿ ದೇವರನ್ನು ಪ್ರತಿಷ್ಠಾಪಿಸಿ ವಿವಿಧ ಕಲಾ ತಂಡಗಳೊಂದಿಗೆ  ಮಹಿಳೆಯರ ಆರತಿ, ದೀಪಗಳ ಮೆರವಣಿಗೆ, ದೇವಸ್ಥಾನ ರಸ್ತೆ, ರಾಣಿ ಚೆನ್ನಮ್ಮ ವೃತ್ತ, ಗಾಂಧಿ ವೃತ್ತ, ಹಳೆ ಪಿ.ಬಿ. ರಸ್ತೆಯ ಮೂಲಕ ಸಂಚರಿಸಿ  ತುಂಗಭದ್ರಾ ನದಿಯ ಅಯ್ಯಪ್ಪ ದೇವಸ್ಥಾನಕ್ಕೆ ಅಂತ್ಯಗೊಂಡಿತು. ರಾತ್ರಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ದೀಪೋತ್ಸವ ನಡೆದು ಸಿಡಿಮದ್ದಿನ ಪ್ರದರ್ಶನ ಮಾಡಲಾಯಿತು.  

ಈ ಸಂದರ್ಭದಲ್ಲಿ ಕಸಬಾ ಗೌಡ್ರು ಲಿಂಗರಾಜ್ ಪಾಟೀಲ್, ಚಿಂಚೋಳಿ ಮಂಜುನಾಥ್, ಚಂದ್ರಕಾಂತ್ ಹೋವಳೆ,  ಕುಮಾರಸ್ವಾಮಿ ಹಿರೇಮಠ, ಅಂಜನಪ್ಪ, ಚಂದ್ರು ಸರಪದ, ಮಹಾವೀರ, ವೆಂಕಟೇಶ್ ಶೆಟ್ಟಿ ಇತರರು ಹಾಜರಿದ್ದರು.

error: Content is protected !!