ಮಲೇಬೆನ್ನೂರಿನಲ್ಲಿ ರಕ್ತದಾನ ಶಿಬಿರ : ಶಿವಶಂಕರ್ ಸೇರಿ 52 ಜನರಿಂದ ರಕ್ತದಾನ

ಮಲೇಬೆನ್ನೂರಿನಲ್ಲಿ ರಕ್ತದಾನ ಶಿಬಿರ : ಶಿವಶಂಕರ್ ಸೇರಿ 52 ಜನರಿಂದ ರಕ್ತದಾನ

ಮಲೇಬೆನ್ನೂರು, ಜ.15- ಪಟ್ಟಣದ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಸಂಕ್ರಾಂತಿ ಅಂಗವಾಗಿ ಮಲೇಬೆನ್ನೂರು ಲಯನ್ಸ್ ಕ್ಲಬ್ ಮತ್ತು ಶ್ರೀ ವೀರಭದ್ರೇಶ್ವರ ಚಾರಿಟೇಬಲ್ ಟ್ರಸ್ಟ್ ಹಾಗೂ ಲಯನ್ಸ್ ರಕ್ತನಿಧಿ ಮತ್ತು ಶಿವಮೊಗ್ಗದ ಸಹ್ಯಾದ್ರಿ ನಾರಾಯಣ ಆಸ್ಪತ್ರೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರದಲ್ಲಿ 52 ಜನ ರಕ್ತದಾನ ಮಾಡಿದರು.

ಮಾಜಿ ಶಾಸಕ ಹೆಚ್.ಎಸ್.ಶಿವಶಂಕರ್, ಲಯನ್ಸ್ ಕ್ಲಬ್ ಅಧ್ಯಕ್ಷ ಚಿಟ್ಟಕ್ಕಿ ನಾಗರಾಜ್, ಖಜಾಂಚಿ ಭರಮಳ್ಳಿ ಮಂಜುನಾಥ್, ಲಯನ್ಸ್ ಕ್ಲಬ್‌ನ ಮಾಜಿ ಅಧ್ಯಕ್ಷೆ ಶ್ರೀಮತಿ ರೂಪಾ ಪಾಟೀಲ್ ಮತ್ತು ವೀರಭದ್ರೇಶ್ವರ ದೇವಸ್ಥಾನ ಟ್ರಸ್ಟಿನ ಬಿ.ಮಲ್ಲಿಕಾರ್ಜುನ್ ಹಾಗೂ ಮಂಜು ಆರ್ಟ್ಸ್ ಮಾಲೀಕರಾದ ಮಂಜು, ರಾಘವೇಂದ್ರ ಸೇರಿದಂತೆ 52 ಜನ ರಕ್ತದಾನ ಮಾಡಿದರು.

ಜಿಗಳಿ ಕ್ಯಾಂಪಿನ ಕಾಲಶಾಸ್ತ್ರ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ, ಶಾಸಕ ಬಿ.ಪಿ.ಹರೀಶ್, ವೀರಭದ್ರೇಶ್ವರ ದೇವಸ್ಥಾನದ ಬಿ.ಚಿದಾನಂದಪ್ಪ, ಜಿ.ಪಂ. ಮಾಜಿ ಸದಸ್ಯ ಬೆಣ್ಣೆಹಳ್ಳಿ ಹಾಲೇಶಪ್ಪ, ತಳಸದ ಬಸವರಾಜ್, ರೈಸ್ ಮಿಲ್ ಮಾಲೀಕ ಯಕ್ಕನಹಳ್ಳಿ ಬಸವರಾಜಪ್ಪ, ಡಿಸಿಸಿ ಬ್ಯಾಂಕ್ ಮಾಜಿ ಉಪಾಧ್ಯಕ್ಷ ಜಿಗಳಿ ಆನಂದಪ್ಪ, ಲಯನ್ಸ್ ಕ್ಲಬ್ ಕಾರ್ಯದರ್ಶಿ ಸಿರಿಗೆರೆ ಸಿದ್ದಪ್ಪ, ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷರಾದ ಓ.ಜಿ.ರುದ್ರಗೌಡ್ರು, ಡಾ. ಹೆಚ್.ಜೆ.ಚಂದ್ರಕಾಂತ್, ಎನ್.ಜಿ.ಬಸವನಗೌಡ್ರು ಮತ್ತು ದಾವಣಗೆರೆ ಲಯನ್ಸ್ ರಕ್ತನಿಧಿ ಕೇಂದ್ರದ ಮೌನೇಶಾಚಾರ್ ಹಾಗೂ ಶಿವಮೊಗ್ಗ ಸಹ್ಯಾದ್ರಿ ನಾರಾಯಣ ಆಸ್ಪತ್ರೆಯ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

ಮಂಗಳವಾರ ರಕ್ತದಾನ ಶಿಬಿರದ ಜೊತೆಗೆ ಉಚಿತ ಆರೋಗ್ಯ ತಪಾಸಣೆ ಶಿಬಿರವೂ ಇದೇ ಸ್ಥಳದಲ್ಲಿ ನಡೆಯಲಿದೆ.

error: Content is protected !!