ಬಿಇಎ ಶಾಲೆಯಲ್ಲಿ ವಾರ್ಷಿಕೋತ್ಸವ

ಬಿಇಎ ಶಾಲೆಯಲ್ಲಿ ವಾರ್ಷಿಕೋತ್ಸವ

ದಾವಣಗೆರೆ, ಜ. 16 – ನಗರದ ಪಿ.ಜೆ. ಬಡಾವಣೆಯಲ್ಲಿನ ಬಿಇಎ ನರ್ಸರಿ, ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮವು ನಡೆಯಿತು. 

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಬಾಪೂಜಿ ವಿದ್ಯಾಸಂಸ್ಥೆಯ ಉಪಾಧ್ಯಕ್ಷರಾದ ಶ್ರೀಮತಿ ಕಿರುವಾಡಿ ಗಿರಿಜಮ್ಮ ಅವರು ಮಕ್ಕಳ ಶಿಕ್ಷಣದ ಮಹತ್ವ ತಿಳಿಸಿದರು. 

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ತರಳಬಾಳು ವಿದ್ಯಾಸಂಸ್ಥೆ, ಸಿರಿಗೆರೆಯ ನಿವೃತ್ತ ಪ್ರಾಚಾರ್ಯರಾದ ಡಾ. ನಾ.ಲೋಕೇಶ್ ಒಡೆಯರ್ ವಿಶೇಷವಾಗಿ ಸ್ವಾಮಿ ವಿವೇಕಾನಂದರ ಜಯಂತ್ಯೋತ್ಸವವನ್ನು ಸ್ಮರಿಸಿ ವಿದ್ಯಾರ್ಥಿಗಳು ಅವರ ಧ್ಯೇಯಗಳನ್ನು ಅಳವಡಿಸಿಕೊಳ್ಳಲು ಕರೆ ನೀಡಿದರು. 

ಮತ್ತೋರ್ವ ಮುಖ್ಯ ಅತಿಥಿಗಳಾಗಿ ಬಾಪೂಜಿ ವಿದ್ಯಾಸಂಸ್ಥೆಯ ಖಜಾಂಚಿಗಳಾದ ಎ.ಎಸ್.ನಿರಂಜನ್ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಮುಂಚೂಣಿಯಲ್ಲಿದ್ದು ಸಮಾಜ ಸೇವೆಯಲ್ಲಿ ತೊಡಗಿಕೊಳ್ಳಲು ಸಲಹೆ ನೀಡಿದರು. ಶಾಲೆಯ ಮುಖ್ಯೋಪಾಧ್ಯಾಯ ರವಿ.ಜಿ.ಎಸ್ ಉಪಸ್ಥಿತರಿದ್ದರು.  

error: Content is protected !!