ಲಿಂ.ಶಿರಸಂಗಿ ಲಿಂಗರಾಜ ದೇಸಾಯಿ ಜಯಂತಿ ಆಚರಣೆ

ಲಿಂ.ಶಿರಸಂಗಿ ಲಿಂಗರಾಜ ದೇಸಾಯಿ ಜಯಂತಿ ಆಚರಣೆ

ದಾವಣಗೆರೆ, ಜ.10- ರಾಜ್ಯವನ್ನು ಶೈಕ್ಷಣಿಕವಾಗಿ ಮತ್ತು ಸಾಂಸ್ಕೃತಿಕವಾಗಿ ಬೆಳಗಿಸಿದ  ಲಿಂಗೈಕ್ಯ ಶಿರಸಂಗಿ ಲಿಂಗರಾಜ ದೇಸಾಯಿ ಅವರ ಜಯಂತಿಯನ್ನು ವೀರಶೈವ-ಲಿಂಗಾಯತ ಮಹಾಸಭಾ ವತಿಯಿಂದ ಬುಧವಾರ ಆಚರಿಸಲಾಯಿತು.

ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರೂ, ಶಾಸಕರೂ ಆದ  ಡಾ. ಶಾಮನೂರು ಶಿವಶಂಕರಪ್ಪನವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಶಿರಸಂಗಿ ಲಿಂಗರಾಜ ದೇಸಾಯಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಮಹಾಸಭೆಯ ಪ್ರಥಮ ಅಧ್ಯಕ್ಷರಾಗಿ ಸಲ್ಲಿಸಿದ ಸೇವೆ, ನಾಡಿಗೆ ಅವರು ಕೊಟ್ಟಿರುವ ಕೊಡುಗೆಗಳನ್ನು ಸ್ಮರಿಸಲಾಯಿತು.

ಮಹಾಸಭೆಯ ಉಪಾಧ್ಯಕ್ಷರುಗಳಾದ ಅಥಣಿ ವೀರಣ್ಣ, ಅಣಬೇರು ರಾಜಣ್ಣ,  ಶಾಮನೂರು ಗಣೇಶ, ಕಾರ್ಯದರ್ಶಿಗಳಾದ ಹೆಚ್.ಎಂ.ರೇಣುಕಪ್ರಸನ್ನ,  ಜಿಲ್ಲಾ ಘಟಕದ ಅಧ್ಯಕ್ಷರಾದ ದೇವರಮನಿ ಶಿವಕುಮಾರ್‌ ಹಾಗೂ ಜಿಲ್ಲಾ ಘಟಕ, ಮಹಿಳಾ ಮತ್ತು ಯುವ ವಿಭಾಗಗಳ ಪದಾಧಿಕಾರಿಗಳು ಹಾಜರಿದ್ದರು.

error: Content is protected !!