ಜಿಲ್ಲೆಯಲ್ಲಿ ಸರ್ಕಾರಿ ರಜೆ ನೀಡಲು ಮನವಿ

ಜಿಲ್ಲೆಯಲ್ಲಿ ಸರ್ಕಾರಿ ರಜೆ ನೀಡಲು ಮನವಿ

ದಾವಣಗೆರೆ, ಜ.19- ಇದೇ ದಿನಾಂಕ 22ರಂದು ಅಯೋಧ್ಯೆಯಲ್ಲಿ ಶ್ರೀರಾಮ  ದೇವರ ಮೂರ್ತಿ ಪ್ರತಿಷ್ಠಾಪನೆ  ಕಾರ್ಯಕ್ರಮದ ಪ್ರಯುಕ್ತ  ಜಿಲ್ಲೆಯಲ್ಲಿ ಸರ್ಕಾರಿ ರಜೆ ಘೋಷಣೆ ಮಾಡಬೇಕೆಂದು ಒತ್ತಾಯಿಸಿ, ಜಿಲ್ಲಾಧಿಕಾರಿಗಳಿಗೆ ಮಾತೃ ದೇವೋ ಟ್ರಸ್ಟ್ ಮತ್ತು ಪ್ರೇರಣಾ ಸಾಂಸ್ಕೃತಿಕ ಸಂಸ್ಥೆ ವತಿಯಿಂದ ಮನವಿ ಸಲ್ಲಿಸಲಾಯಿತು. ಅಯೋಧ್ಯೆಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಲಕ್ಷಾಂತರ ಮಂದಿ ಭಾಗಿಯಾಗಲಿದ್ದಾರೆ. ಈ ಅಪರೂಪದ ಕ್ಷಣಗಳಿಗೆ ನೇರವಾಗಿ ಸಾಕ್ಷಿಯಾಗಲು ಎಲ್ಲರಿಂದಲೂ ಸಾಧ್ಯವಿಲ್ಲ. ಹೀಗಾಗಿ ಅಂದಿನ ದೃಶ್ಯಗಳನ್ನು ಕಣ್ತುಂಬಿಕೊಳ್ಳಲು, ಹಾಗೂ   ಜಿಲ್ಲೆಯಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಈ ಕಾರಣ  ಜಿಲ್ಲೆಯಾದ್ಯಂತ ಶಾಲಾ-ಕಾಲೇಜು ಹಾಗೂ ಸರ್ಕಾರಿ ಕಚೇರಿಗಳಿಗೆ ರಜೆ ನೀಡಬೇಕೆಂದು ಮನವಿ ಮಾಡಿದರು. 

ಈ ಸಂದರ್ಭದಲ್ಲಿ ಬಾಡದ ಆನಂದರಾಜ್, ಮಾಜಿ ಮೇಯರ್  ಎಸ್.ಟಿ. ವೀರೇಶ್, ಪೋತಲು ಶ್ರೀನಿವಾಸ್, ಶ್ರೀಮತಿ ಚೇತನಾ, ಶ್ರೀಮತಿ ಭಾಗ್ಯ ಪಿಸಾಳೆ, ಚಂದ್ರಕಲಾ ಎಂ, ನವೀನ್ ಗುಬ್ಬಿ, ಗಂಗಾಧರ ಜಿ.ವಿ, ಶಿವನಗೌಡ ಪಾಟೀಲ್, ಟಿಂಕರ್ ಮಂಜಣ್ಣ ಇನ್ನೂ ಮುಂತಾದ ಹಿಂದೂ ಪರ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

error: Content is protected !!