ಮಂದಿರ ಪ್ರಾಣ ಪ್ರತಿಷ್ಠಾಪನೆಯನ್ನು ವೀಕ್ಷಿಸಿದ ಸಂಸದ ಜಿ.ಎಂ. ಸಿದ್ದೇಶ್ವರ

ಮಂದಿರ ಪ್ರಾಣ ಪ್ರತಿಷ್ಠಾಪನೆಯನ್ನು ವೀಕ್ಷಿಸಿದ ಸಂಸದ ಜಿ.ಎಂ. ಸಿದ್ದೇಶ್ವರ

ದಾವಣಗೆರೆ, ಜ. 24 – ಅಯೋಧ್ಯೆಯಲ್ಲಿ ಪ್ರಭು ಶ್ರೀ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಶ್ರೀ ರಾಮನ ಮೂರ್ತಿಗೆ ಪೂಜೆ ಸಲ್ಲಿಸಿದರು.

ಇದೇ ವೇಳೆ ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆಯನ್ನು ನೇರ ಪ್ರಸಾರದಲ್ಲಿ ವೀಕ್ಷಿಸುವ ಮೂಲಕ ಪ್ರಭು ಶ್ರೀ ರಾಮನ ಪವಿತ್ರ ದರ್ಶನವನ್ನು ಪಡೆದರು. ನಂತರ ಸೆಲ್ಫಿ ವಿತ್ ನನ್ನ ರಾಮ ಅಭಿಯಾನದಲ್ಲಿ ಎಲ್ಲರೂ ಪಾಲ್ಗೊಂಡರು.

ಈ ಸಂದರ್ಭದಲ್ಲಿ ಸಂಸದ ಜಿ.ಎಂ. ಸಿದ್ದೇಶ್ವರ, ನೂತನ ಜಿಲ್ಲಾಧ್ಯಕ್ಷ  ಎನ್. ರಾಜಶೇಖರ್, ಮುಖ್ಯ ಸಚೇತಕ ಎನ್. ರವಿ ಕುಮಾರ್, ಮಾಜಿ ಶಾಸಕ ಬಸವರಾಜ್ ನಾಯ್ಕ್, ಮಾಜಿ ಜಿಲ್ಲಾಧ್ಯಕ್ಷ ಯಶವಂತರಾವ್ ಜಾಧವ್, ಮುಖಂಡ ವೈ. ಮಲ್ಲೇಶ್, ರಾಜನಹಳ್ಳಿ ಶಿವಕುಮಾರ್, ಎಸ್.ಟಿ. ವೀರೇಶ್, ಪ್ರಸನ್ನ ಕುಮಾರ್ ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು.

error: Content is protected !!